ತಾ.ಪಂ ಅಧ್ಯಕ್ಷರ ಕೊಠಡಿಯಲ್ಲಿ ಬಿಯರ್ ಬಾಟಲ್ ಒಡೆದ ಕಿಡಿಗೇಡಿಗಳು

Public TV
1 Min Read

ಯಾದಗಿರಿ: ತಾಲೂಕು ಪಂಚಾಯತ್ ಅಧ್ಯಕ್ಷರ ಕೊಠಡಿಯಲ್ಲಿ ಕಿಡಿಗೇಡಿಗಳು ಬಿಯರ್ ಬಾಟಲ್ ಒಡೆದಿರುವ ಘಟನೆ ನಡೆದಿದೆ. ಕೊಠಡಿ ತುಂಬೆಲ್ಲ ಬಿಯರ್ ಬಾಟಲ್ ಗ್ಲಾಸ್ ಹಾಗೂ ಕಲ್ಲುಗಳು ಬಿಸಾಕಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ತಾ.ಪಂ ಅಧ್ಯಕ್ಷೆ ಭಿಮ್ಮವ್ವ ಅಚ್ಚೋಲಾ ಮತ್ತು ಸದಸ್ಯರ ನಡುವೆ ಮುಸುಕಿನ ಗುದ್ದಾಟ ಹಿನ್ನೆಲೆಯಲ್ಲಿ ಕೃತ್ಯ ಮಾಡಿದ್ದಾರೆ ಎನ್ನಲಾಗಿದೆ. ಒಂದೇ ತಿಂಗಳಲ್ಲಿ ಎರಡು ಬಾರಿ ಇದೇ ರೀತಿಯ ಘಟನೆ ನಡೆದಿದ್ದು ಗೊಂದಲಕ್ಕೆ ಕಾರಣವಾಗಿದೆ. ಅಧ್ಯಕ್ಷರ ಹೆಸರಿಗೆ ಕಳಂಕ ತರಲು ತಾ.ಪಂ ಸದಸ್ಯರೇ ಈ ರೀತಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಒಂದೇ ತಿಂಗಳಲ್ಲಿ ಎರಡು ಬಾರಿ ಈ ರೀತಿಯ ಘಟನೆ ನಡೆದ ಹಿನ್ನೆಲೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪೊಲೀಸರಿಗೆ ದೂರು ಕೊಟ್ಟು ಕಿಡಿಗೇಡಿಗಳ ಪತ್ತೆಗೆ ಮುಂದಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ ಇನ್ನುಮುಂದೆ ಕಚೇರಿಯಲ್ಲಿ ಸಿಸಿಟಿವಿ ಅಳವಡಿಸುವುದಾಗಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *