ಮಕ್ಕಳೊಂದಿಗೆ ಮಗುವಾದ ಯದುವೀರ್ ಒಡೆಯರ್

Public TV
1 Min Read

ಮೈಸೂರು: ಸಾಂಸ್ಕೃತಿಕ ನಗರಿಯ ಮೈಸೂರಿನ ಅರಮನೆ ಆವರಣದಲ್ಲಿ ಭಾನುವಾರ ಬರೀ ಮಕ್ಕಳದೇ ಕಲರವ ಕೇಳಿ ಬಂದಿದ್ದು, ಯದುವೀರ್ ಮಕ್ಕಳೊಂದಿಗೆ ಮಗುವಾಗಿದ್ದಾರೆ.

ಮಕ್ಕಳ ಜೊತೆ ರಾಜವಂಶಸ್ಥರಾದ ಯದುವೀರ್ ಅವರು ಬೆರೆತು ಮಕ್ಕಳ ಸಂತೋಷ ಹೆಚ್ಚಿಸಿದರು. ಮಕ್ಕಳ ದಿನಾಚರಣೆ ಅಂಗವಾಗಿ ಭೇರುಂಡ ಸಂಸ್ಥೆ ವತಿಯಿಂದ ಅರಮನೆಯ ಆವರಣದಲ್ಲಿ ಮಕ್ಕಳಿಗೆ ಚಿತ್ರ ಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.

ಭೇರುಂಡ ಸಂಸ್ಥೆಯ ಸ್ಥಾಪಕ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಿತ್ರಕ್ಕೆ ಬಣ ತುಂಬುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಮ್ಮ ಇತಿಹಾಸವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿದ್ದರು.

ಸದ್ಯ ಚಿತ್ರಕಲಾ ಸ್ಪರ್ಧೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಮಕ್ಕಳ ಕುಂಚದಲ್ಲಿ ಮೈಸೂರಿನ ಐತಿಹಾಸಿಕ ತಾಣಗಳು ಹಾಗೂ ಪ್ರಾಕೃತಿಕ ಚಿತ್ರಗಳು ಮೂಡಿ ಬಂದವು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article
Leave a Comment

Leave a Reply

Your email address will not be published. Required fields are marked *