ಯಶ್ (Yash) ಹುಟ್ಟುಹಬ್ಬದ (Birthday) ಸಲುವಾಗಿ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ ಮೂವರು ಮೃತಪಟ್ಟಿದ್ದಾರೆ. ಇನ್ನುಳಿದ ಮೂವರಿಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಗಂಭೀರ ಪರಿಸ್ಥಿತಿಯಲ್ಲಿರೋ ಅಭಿಮಾನಿಗಳನ್ನು ನೋಡಲು ಯಶ್ ಗದಗದ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ.
ಗದಗ ಜಿಲ್ಲೆ ಸೊರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬದ ಅಂಗವಾಗಿ ತಡರಾತ್ರಿ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ ಮುರಳಿ, ನವೀನ್, ಹನುಮಂತ ಎಂಬ ಮೂವರು ನಿಧನರಾಗಿದ್ದು, ಅವರ ಕುಟುಂಬಸ್ಥರಿಗೆ ಭೇಟಿಯಾಗಿ ಯಶ್ ಸಾಂತ್ವನ ಹೇಳಿದ್ದಾರೆ. ಕುಟುಂಬದ ಜೊತೆ ನಿಲ್ಲುವುದಾಗಿ ಯಶ್ ಭರವಸೆ ನೀಡಿದ್ದಾರೆ. ಇದನ್ನೂ ಓದಿ:ವಿದ್ಯುತ್ ಸ್ಪರ್ಶ ದುರ್ಘಟನೆ ವೇಳೆ ಯಶ್ ಎಲ್ಲಿದ್ದರು?
ಈ ಅವಘಡದಲ್ಲಿ ಇನ್ನೂ ಮೂವರಿಗೆ ಕರೆಂಟ್ ಶಾಕ್ನಿಂದ ಗಂಭೀರ ಗಾಯಗಳಾಗಿದೆ. ಗದಗದ ಜೆಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಗೆ ಯಶ್ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ದುಃಖದ ಭಾವದಲ್ಲಿಯೇ ಹುಬ್ಬಳ್ಳಿ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಗೋವಾದತ್ತ ಯಶ್ ಮರಳಿದ್ದಾರೆ. ಒಟ್ನಲ್ಲಿ ಅಭಿಮಾನಿಗಳ ಮೇಲೆಟ್ಟಿರೋ ಯಶ್ ಅಭಿಮಾನಕ್ಕೆ ಫ್ಯಾನ್ಸ್ ಶ್ಲಾಘಿಸಿದ್ದಾರೆ.