ಯಶ್ ದಂಪತಿಯಿಂದ ಶತ್ರು ಸಂಹಾರ ಯಾಗ

Public TV
1 Min Read

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ‘ಕೆಜಿಎಫ್ 2’ ಅಡ್ಡಾ ಬಿಟ್ಟು ದೇವರ ಮೊರೆ ಹೋಗಿದ್ದು, ಪತ್ನಿ ರಾಧಿಕಾ ಮತ್ತು ಕುಟುಂಬದವರ ಜೊತೆ ಸೇರಿ ಶತ್ರು ಸಂಹಾರ ಯಾಗವನ್ನು ಮಾಡಿಸುತ್ತಿದ್ದಾರೆ.

ಯಶ್ ಕುಟುಂಬ ಮಲ್ಲೇಶ್ವರಂನಲ್ಲಿರುವ ದುರ್ಗಾ ರಾಧಾ-ಕೃಷ್ಣ ದೇವಸ್ಥಾನದಲ್ಲಿ ಪೂಜೆ ಮಾಡಿಸುತ್ತಿದ್ದಾರೆ. ಇಂದು ಬೆಳಗ್ಗೆ ಸುಮಾರು 10.30ರಿಂದ ಪೂಜೆ ಮಾಡಿಸುತ್ತಿದ್ದಾರೆ. ಸದ್ಯಕ್ಕೆ ಯಶ್ ದಂಪತಿ ಮಾರ್ಕಂಡೇಯ ಹೋಮ ಮಾಡಿಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಅಪಕಂಟಕ ಮತ್ತು ಶತ್ರು ನಾಶಕ್ಕೆ ಮಾರ್ಕಂಡೇಯ ಹೋಮ ಮಾಡಿಸಲಾಗುತ್ತದೆ. ಹೋಮದಲ್ಲಿ ಯಶ್, ರಾಧಿಕಾ, ಯಶ್ ತಂದೆ ಮತ್ತು ತಾಯಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಇಂದು ದೇವಸ್ಥಾನಕ್ಕೆ ಬರುವ ಭಕ್ತರಿಗೆ ದೇವಸ್ಥಾನದ ಸಿಬ್ಬಂದಿ ಪ್ರವೇಶ ತಡೆಹಿಡಿದಿದ್ದಾರೆ.

ಮತ್ತೊಂದೆಡೆ ಯಶ್ ಮತ್ತು ರಾಧಿಕಾ ತಮ್ಮ ಪುತ್ರನಿಗೆ ಸರಳವಾಗಿ ನಾಮಕರಣ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಯಶ್ ಇದ್ದಕ್ಕಿದ್ದಂತೆ ಕೆಜಿಎಫ್ ಸಿನಿಮಾ ಶೂಟಿಂಗ್‍ನಿಂದ ಬಂದು ಮಾರ್ಕಂಡೇಯ ಹೋಮ ಮಾಡಿಸುತ್ತಿರುವುದು ಯಾಕೆ ಎಂಬ ಗೊಂದಲ ಅಭಿಮಾನಿಗಳಲ್ಲಿ ಮೂಡಿದೆ.

ಸದ್ಯಕ್ಕೆ ಯಶ್ ಬಹುನಿರೀಕ್ಷಿತ ‘ಕೆಜಿಎಫ್ ಚಾಪ್ಟರ್-2’ ಸಿನಿಮಾದ ಶೂಟಿಂಗ್‍ನಲ್ಲಿ ಬ್ಯುಸಿಯಿದ್ದಾರೆ. ಮೈಸೂರಿನಲ್ಲಿ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಅಲ್ಲಿಂದ ಬೆಂಗಳೂರಿಗೆ ಬಂದು ಇಂದು ಶತ್ರು ಸಂಹಾರ ಯಾಗದ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *