ಯತೀಂದ್ರ ಸಿಎಂ ಮಗ ಅನ್ನೋದು ಬಿಟ್ರೆ ಬೇರೆ ಯಾವುದರಲ್ಲೂ ನನಗೆ ಸರಿಸಮಾನನಿಲ್ಲ-ವರುಣಾ ಬಿಜೆಪಿ ಅಭ್ಯರ್ಥಿ ಬಸವರಾಜು

Public TV
1 Min Read

ಬೆಂಗಳೂರು: ಯತೀಂದ್ರ ಸಿಎಂ ಸಿದ್ದರಾಮಯ್ಯರ ಮಗ ಅನ್ನೋದು ಬಿಟ್ಟರೆ, ಬೇರೆ ಯಾವುದರಲ್ಲೂ ನನಗೆ ಸರಿ ಸಮಾನನಿಲ್ಲ ಅಂತಾ ವರುಣಾ ಕೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜು ಹೇಳಿದ್ದಾರೆ.

ನಗರದ ಮಲ್ಲೇಶ್ವರ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿದ ಬಳಿಕ ನೀಡಿದ ಮಾತನಾಡಿದ ಬಸವರಾಜು, ನೂರಕ್ಕೆ ನೂರರಷ್ಟು ವರುಣಾದಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ. ಸದ್ಯ ವರುಣಾದಲ್ಲಿ ಪರಿಸ್ಥಿತಿ ಸರಿ ಇಲ್ಲ, ಆದ್ರೆ ಇನ್ನೆರೆಡು ದಿನ ಬಿಟ್ಟು ಕ್ಷೇತ್ರದಲ್ಲಿ ವಿಜಯೇಂದ್ರ ಮತ್ತು ಯಡಿಯೂರಪ್ಪ ಅವರು ಬಂದು ಪ್ರಚಾರ ಮಾಡಲಿದ್ದಾರೆ. ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಟ್ಟು ಬಿಜೆಪಿ ಶಕ್ತಿ ಏನು ಅನ್ನೋದನ್ನ ತೋರಿಸುವುದಕ್ಕೆ ಮುಂದಾಗಿದೆ ಅಂತಾ ಹೇಳಿದ್ರು. ಇದನ್ನೂ ಓದಿ: ವಿಜಯೇಂದ್ರಗೆ ಟಿಕೆಟ್ ತಪ್ಪಿದ ಎಫೆಕ್ಟ್-ನೋಟಾ ಚಲಾವಣೆ ಅಭಿಯಾನದ ಕರಪತ್ರ ಫುಲ್ ವೈರಲ್

ಯಾರೋ ಕೆಲ ಕಿಡಿಗೇಡಿಗಳು ವರುಣಾದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ನೋಟಾ ಅಭಿಯಾನ ಮಾಡ್ತಿದ್ದಾರೆ. ಆದ್ರೆ ಅವರು ಯಾರು ಬಿಜೆಪಿ ಕಾರ್ಯಕರ್ತರಲ್ಲ. ನಮ್ಮ ಪಕ್ಷದ ಕಾರ್ಯಕರ್ತರು ಅಂತಹ ಕೆಲಸ ಮಾಡಲ್ಲ ಅಂತಾ ಸ್ಪಷ್ಟನೆ ನೀಡಿದ್ರು.

Share This Article
Leave a Comment

Leave a Reply

Your email address will not be published. Required fields are marked *