ಸಮ್ಮಿಶ್ರ ಸರ್ಕಾರದ ನಿರ್ಧಾರಕ್ಕೆ ಬೇಸರಗೊಂಡ ಯಡಿಯೂರಪ್ಪ

Public TV
1 Min Read

ಬೆಂಗಳೂರು: ಸಮ್ಮಿಶ್ರ ಸರ್ಕಾರ ಶನಿವಾರ ಎಲ್ಲ ನಾಯಕರಿಗೆ ಸರ್ಕಾರಿ ನಿವಾಸಗಳನ್ನು ಹಂಚಿಕೆ ಮಾಡಿತ್ತು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ರೇಸ್ ಕೋರ್ಸ್ ರಸ್ತೆಯ ನಂಬರ್ 4 ನಿವಾಸವನ್ನು ಹಂಚಿಕೆ ಮಾಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಯಡಿಯೂರಪ್ಪ ಕೇಳಿರುವ ನಿವಾಸ ಬೇರೆ ಬಂಗಲೆಯನ್ನು ನೀಡಲಾಗಿದೆ. ನನಗೆ ಯಾವುದೇ ಸರ್ಕಾರಿ ಬಂಗಲೆ ಬೇಡ ನಾನು ಸ್ವಂತ ಡಾಲರ್ಸ್ ಕಾಲೋನಿ ಧವಳಗಿರಿ ಮನೆಯಲ್ಲಿಯೇ ವಾಸವಾಗಿರುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.

ಯಡಿಯೂರಪ್ಪ ಅವರು ರೇಸ್ ಕೋರ್ಸ್ ನ ನಂಬರ್ 2 ನಿವಾಸವನ್ನು ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದಿದ್ದರು. ಆದರೆ ಸರ್ಕಾರ ನಂಬರ್ 2 ನಿವಾಸವನ್ನು ಸಚಿವ ಸಾ.ರಾ.ಮಹೇಶ್‍ಗೆ ನೀಡಿ, ಯಡಿಯೂರಪ್ಪ ನಂಬರ್ 4 ನಿವಾಸ ನೀಡಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ನಂಬರ್ 4 ನಿವಾಸಕ್ಕೆ ಹೋಗಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಬಂಗಲೆಗಳಲ್ಲಿ ಇರಲೇಬೇಡಿ- ಮಕ್ಕಳಿಬ್ಬರಿಗೆ ದೇವೇಗೌಡರ ಸಲಹೆ

ಲಕ್ಕಿ ಬಂಗಲೆ: ನಂಬರ್ 2 ನಿವಾಸ ಲಕ್ಕಿ ಬಂಗಲೆ ಎಂದು ಕರೆಸಿಕೊಳ್ಳುತ್ತದೆ. ಈ ಹಿಂದೆ 2004ರಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾಗ ಯಡಿಯೂರಪ್ಪ ಇದೇ ನಿವಾಸದಲ್ಲಿ ವಾಸವಾಗಿದ್ದರು. ನಂತರ ಇದೇ ಮನೆಯಲ್ಲಿಯೇ ಇದ್ದಾಗ ಉಪ ಮುಖ್ಯಮಂತ್ರಿ ಮತ್ತು ಸಿಎಂ ಸ್ಥಾನಕ್ಕೆ ಏರಿದ್ದರು. ಈ ಹಿನ್ನೆಲೆಯಲ್ಲಿ ನಂಬರ್ 2 ನಿವಾಸ ರೇಸ್‍ವ್ಯೂವ್ ಕಾಟೇಜ್-2 ಅಂತನೇ ಕರೆಸಿಕೊಳ್ಳುತ್ತದೆ. ಇದನ್ನೂ ಓದಿ: ಅದೃಷ್ಟದ ಮನೆ ತೊರೆಯಲು ಮುಂದಾದ ಸಿದ್ದರಾಮಯ್ಯ!

ಸಿದ್ದರಾಮಯ್ಯರ ಸರ್ಕಾರದಲ್ಲಿ ಮಾಜಿ ಸಚಿವ ರಮಾನಾಥ್ ರೈ ವಾಸವಾಗಿದ್ದರು. ಸಮ್ಮಿಶ್ರ ಸರ್ಕಾರದ ನಾಯಕರು ಪ್ರತಿಯೊಂದಕ್ಕೂ ಜೋತಿಷ್ಯವನ್ನು ಅವಲಂಭಿಸಿರುವ ಕಾರಣ ಸಹಜವಾಗಿಯೇ ಯಡಿಯೂರಪ್ಪರಿಗೆ ಅಧೃಷ್ಟದ ಮನೆ ನೀಡಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

Share This Article
Leave a Comment

Leave a Reply

Your email address will not be published. Required fields are marked *