ಆ ಯಡಿಯೂರಪ್ಪಗೆ 76-77 ವರ್ಷ ವಯಸ್ಸಾಗಿದೆ ಇನ್ನೂ ಬುದ್ಧಿ ಬಂದಿಲ್ಲ: ಸಿದ್ದರಾಮಯ್ಯ

Public TV
1 Min Read

ಚಿಕ್ಕಮಗಳೂರು: ಬಿಜೆಪಿಯವರು ಅತ್ಯಂತ ಮಾನಗೆಟ್ಟವರು, ಲಜ್ಜೆಗೆಟ್ಟವರು. ಆ ಯಡಿಯೂರಪ್ಪಗೆ 76-77 ವರ್ಷ ವಯಸ್ಸಾಗಿದೆ ಇನ್ನೂ ಬುದ್ಧಿ ಬಂದಿಲ್ಲ ಎಂದು ಹೇಳಿ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಕಡೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಕಳೆದ 6 ತಿಂಗಳಿನಿಂದ ಸರ್ಕಾರ ಅಭದ್ರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಯವರು ನಮ್ಮ ಶಾಸಕರಿಗೆ ಕೋಟ್ಯಂತರ ರೂಪಾಯಿ ಆಫರ್ ನೀಡಿದ್ದಾರೆ. ಅವರ ಶಾಸಕರನ್ನು ರೆಸಾರ್ಟ್ ನಲ್ಲಿ ಕೂಡಿ ಹಾಕಿದ್ದಾರೆ. ನಾಳೆ ಸರ್ಕಾರ ಮಾಡುತ್ತೇವೆ, ನಾಡಿದ್ದು ಸರ್ಕಾರ ಮಾಡುತ್ತೇವೆ ಎಂದು ಹೇಳುತ್ತಾರೆ. ಆದರೆ ಎಲ್ಲಾ ಬರೀ ಸುಳ್ಳು, ದಯವಿಟ್ಟು ಅವರು ಏನೇ ಹೇಳಿದರೂ ಅದೆಲ್ಲಾ ಸುಳ್ಳೆಂದು ಪ್ರಚಾರ ಮಾಡಿ ಎಂದರು.

ಬಿಜೆಪಿಯವರಿಗೆ ಪ್ರಜಾಪ್ರಭುತ್ವ ಹಾಗೂ ಸಂವಿಧಾನದಲ್ಲಿ ನಂಬಿಕೆ ಇಲ್ಲ. ಜನ ವಿರೋಧ ಪಕ್ಷದಲ್ಲಿ ಕೂರುವಂತೆ ಹೇಳಿದ್ದಾರೆ. ಅಧಿಕಾರ ಮಾಡಲು ತೀರ್ಪು ನೀಡಿಲ್ಲ. ಆದರೆ ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಬರುತ್ತಿದ್ದಾರೆ. ಸರ್ಕಾರವನ್ನು ಅಭದ್ರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *