‘ಅನರ್ಹ ಮಾಡಿದವರಿಗೆ ಪಾಠ ಕಲಿಸಿದ್ದಾರೆ’ – ಯಲ್ಲಾಪುರದಲ್ಲಿ ಶಿವರಾಂ ಹೆಬ್ಬಾರ್ ಗೆಲುವು

Public TV
1 Min Read

ಕಾರವಾರ: ಯಲ್ಲಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ 30 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ದಾರೆ.

17 ಸುತ್ತುಗಳು ಮುಕ್ತಾಯಗೊಂಡಿದ್ದು ಶಿವರಾಂ ಹೆಬ್ಬಾರ್ 31,406 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಶಿವರಾಂ ಹೆಬ್ಬಾರ್ 80,440 ಮತಗಳನ್ನು ಪಡೆದರೆ ಕಾಂಗ್ರೆಸ್ಸಿನ ಭೀಮಣ್ಣ ನಾಯ್ಕ್ 49,034 ಮತಗಳು ಪಡೆದಿದ್ದಾರೆ. ಜಡಿಎಸ್‍ನಿಂದ ಸ್ಪರ್ಧಿಸಿದ್ದ ಚೈತ್ರಾ ಗೌಡ 1,235 ಮತಗಳು ಪಡೆದಿದ್ದು 1,444 ನೋಟಾ ಮತ ಚಲಾವಣೆಯಾಗಿದೆ.

ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಶಿವರಾಂ ಹೆಬ್ಬಾರ್, ಅನರ್ಹ ಮಾಡಿದವರಿಗೆ ಪಾಠ ಕಲಿಸಿದ್ದಾರೆ. ಜನ ನನಗೆ ಆಶೀರ್ವಾದ ಮಾಡಿದ್ದಾರೆ ಎಂದು ತಿಳಿಸಿದರು.

ಬೆಳಗ್ಗೆ 10.30ರ ವೇಳೆಗೆ ಬಿಜೆಪಿ 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಕಾಂಗ್ರೆಸ್ 2, ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ಮುನ್ನಡೆ ಸಾಧಿಸಿದ್ದಾರೆ.

ಕಾಗವಾಡ, ಅಥಣಿ, ಗೋಕಾಕ್, ಕೆಆರ್ ಪುರಂ, ಚಿಕ್ಕಬಳ್ಳಾಪುರ, ಹಿರೇಕೆರೂರು, ಮಹಾಲಕ್ಷ್ಮಿ ಲೇಔಟ್, ರಾಣೇಬೆನ್ನೂರು, ಕೆಆರ್ ಪೇಟೆ, ಯಶವಂತಪುರ, ವಿಜಯನಗರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಶಿವಾಜಿನಗರ ಮತ್ತು ಹುಣಸೂರಿನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

Share This Article
Leave a Comment

Leave a Reply

Your email address will not be published. Required fields are marked *