ಶೀಘ್ರವೇ ಹಸೆಮಣೆ ಏರಲಿದ್ದಾರೆ ಟೀಂ ಇಂಡಿಯಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ

Public TV
2 Min Read

ಮುಂಬೈ: ಕೆಲ ದಿನಗಳಿಂದ ಟೀಂ ಇಂಡಿಯಾದಿಂದ ದೂರ ಉಳಿದಿದ್ದ ಭಾರತೀಯ ಮಹಿಳಾ ಕ್ರಿಕೆಟರ್ (Cricketer) ವೇದಾ ಕೃಷ್ಣಮೂರ್ತಿ (Veda Krishnamurthy) ಇದೀಗ ಲೈಫ್‌ನಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ.

ವೇದಾ ಕೃಷ್ಣಮೂರ್ತಿ ಕೆಲ ದಿನಗಳಿಂದ ಟೀಂ ಇಂಡಿಯಾದಿಂದ (Team India) ದೂರ ಉಳಿದಿದ್ದರು. ಆದರೆ ಈಗ ಅವರ ಬದುಕಿನ ಹೊಸ ಇನ್ನಿಂಗ್ಸ್ ಆರಂಭವಾಗುತ್ತಿದ್ದು, ಶೀಘ್ರದಲ್ಲೇ ಸಪ್ತಪದಿ ತುಳಿಯಲ್ಲಿದ್ದಾರೆ. ಇದನ್ನು ಸ್ವತಃ ವೇದಾ ಅವರೇ ಸಾಮಾಜಿಕ ಜಾಲತಾಣದಲ್ಲಿ (Social Media) ಬಹಿರಂಗಪಡಿಸಿದ್ದಾರೆ.

ವೇದಾ ಅವರು ತಮ್ಮ ಗೆಳೆಯ ಮತ್ತು ಈಗ ನಿಶ್ಚಿತ ವರ ಅರ್ಜುನ್ ಹೊಯ್ಸಳ ಅವರೊಂದಿಗೆ ಕಾಣಿಸಿಕೊಂಡಿರುವ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಚಿತ್ರಗಳಲ್ಲಿ ಅರ್ಜುನ್ ಮಂಡಿಯೂರಿ ವೇದಾರಿಗೆ ರೊಮ್ಯಾಂಟಿಕ್ ಆಗಿ ಪ್ರಪೋಸ್ ಸಹ ಮಾಡ್ತಿದ್ದಾರೆ. ಇದನ್ನೂ ಓದಿ: ವಿಶ್ವವಿದ್ಯಾಲಯದ ಪರೀಕ್ಷೆ ಪ್ರವೇಶ ಪತ್ರದಲ್ಲಿ ಮೋದಿ, ಧೋನಿ ಫೋಟೋ – ತನಿಖೆಗೆ ಆದೇಶ

ವೇದಾ ಅವರನ್ನು ವರಿಸಲಿರುವ ಅರ್ಜುನ್ ಹೊಯ್ಸಳ (Arjun Hoysala) ಕೂಡ ಕ್ರಿಕೆಟಿಗರಾಗಿದ್ದು, ಅವರು ದೇಶೀಯ ಕ್ರಿಕೆಟ್‌ನಲ್ಲಿ ಕರ್ನಾಟಕದ ಪರವಾಗಿ ಆಡುತ್ತಾರೆ. 2016 ರಲ್ಲಿ ಪ್ರಥಮ ದರ್ಜೆಗೆ ಪದಾರ್ಪಣೆ ಮಾಡಿದ ಅರ್ಜುನ್ ಕೂಡ ತಂಡದ ಉತ್ತಮ ಬ್ಯಾಟ್ಸ್‌ಮನ್‌ ಆಗಿದ್ದಾರೆ. ಆದರೆ ಅವರು ಇನ್ನೂ ಐಪಿಎಲ್ ಅಥವಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಾರ್ಪಣೆ ಮಾಡಲು ಸಾಧ್ಯವಾಗಿಲ್ಲ. 32 ವರ್ಷದ ಅರ್ಜುನ್ 2019 ರ ಕರ್ನಾಟಕ ಪ್ರೀಮಿಯರ್ ಲೀಗ್‌ನಲ್ಲಿ ಶಿವಮೊಗ್ಗ ಲಯನ್ಸ್ ಪರ ಆಡಿದ್ದರು. ಇದನ್ನೂ ಓದಿ: ಸಿಕ್ಸ್ ಚಚ್ಚಿ ಅಂಪೈರ್‌ರನ್ನು ಬಡಿದೆಬ್ಬಿಸಿದ ಸ್ಮಿತ್ – ಆಸಿಸ್ ಆಟಗಾರನ ಕ್ರೀಡಾ ಬದ್ಧತೆಗೆ ಮೆಚ್ಚುಗೆ

ಕಳೆದ ಕೆಲವು ವರ್ಷಗಳು ವೇದಾ ಕೃಷ್ಣಮೂರ್ತಿಯವರಿಗೆ ಉತ್ತಮವಾಗಿಲ್ಲ. ಅವರು ಟೀಂ ಇಂಡಿಯಾದಿಂದ ಹೊರಗಿದ್ದರು. ಆದರೆ ಅವರ ಕುಟುಂಬವೂ ಸಾಕಷ್ಟು ಕಷ್ಟಗಳನ್ನು ಎದುರಿಸಿತು. 2021ರಲ್ಲಿ ಕೊರೊನಾದ (Corona) 2ನೇ ಅಲೆಯು ಅವರ ತಾಯಿ ಮತ್ತು ಸಹೋದರಿ ಇಬ್ಬರನ್ನೂ ಬಲಿ ಪಡೆಯಿತು. ಇದು ವೇದ ಅವರ ಮನಸ್ಸಿನ ಮೇಲೆ ಬಹಳ ಪ್ರಭಾವ ಬೀರಿತ್ತು.

ಇದುವರೆಗೆ 48 ಏಕದಿನ ಪಂದ್ಯ, 76 ಟಿ20 ಪಂದ್ಯಗಳನ್ನಾಡಿರುವ ವೇದಾ ಕೃಷ್ಣಮೂರ್ತಿ 10 ಅರ್ಧಶತಕಗಳನ್ನ ಬಾರಿಸಿ ಮಿಂಚಿದ್ದಾರೆ. ಆದರೆ ಈವರೆಗೆ ಒಂದೇ ಒಂದು ಶತಕವನ್ನು ಗಳಿಸಿಲ್ಲ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *