ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದವರ ವಿರುದ್ಧ ಕ್ರಮ: ಯೋಗಿ

Public TV
2 Min Read

ಲಕ್ನೋ: ಪದ್ಮಾವತಿ ಚಿತ್ರದ ನಿರ್ದೇಶಕ ಸಜಯ್ ಲೀಲಾ ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಪದ್ಮಾವತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದ ವ್ಯಕ್ತಿಗಳ ಮೇಲೆ ಕ್ರಮ ಕೈಗೊಳ್ಳುವುದರ ಜೊತೆಗೆ ಜನರ ಭಾವನೆಗಳ ಜೊತೆ ಆಟವಾಡಿರುವ ನಿರ್ದೇಶಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಈಗಾಗಲೇ ಚಿತ್ರದಲ್ಲಿ ಇರುವ ಆಕ್ಷೇಪಗಳ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಿಳಿಸಿದ್ದು, ಸಲಹೆ ನೀಡುವಂತೆ ಕೇಳಿಕೊಂಡಿದ್ದೇವೆ. ಜನರ ಭಾವನೆಗಳ ಜೊತೆ ಆಟವಾಡಲು ಯಾರನ್ನು ಬಿಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಬಿಡುಗಡೆಗೂ ಮುನ್ನ ಭಾರೀ ವಿವಾದಗಳನ್ನು ಸೃಷ್ಟಿಸಿರುವ ಪದ್ಮಾವತಿ ಸಿನಿಮಾದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಹಾಗೂ ರಾಣಿ ಪದ್ಮಾವತಿ ನಡುವೆ ರೊಮ್ಯಾಂಟಿಕ್ ಸೀನ್‍ಗಳಿವೆ ಎಂದು ಆರೋಪಿಸಿ ಚಿತ್ರದ ಬಿಡುಗಡೆಗೆ ರಾಜಪುತ ಸಂಘಟನೆಗಳು ಪ್ರತಿಭಟಿಸಿದ್ದವು.

ರಾಜಪೂತ ಕರ್ನಿಸೇನಾ ಸಂಘಟನೆಯ ನಾಯಕರು ಸಹ ಚಿತ್ರ ಬಿಡುಗಡೆ ಕುರಿತು ನಿರ್ದೇಶಕರಿಗೆ ಬೆದರಿಕೆ ಹಾಕಿದ್ದರು. ಆರಂಭದಲ್ಲಿ ಚಿತ್ರೀಕರಣದ ವೇಳೆ ರಜಪೂತ್ ಕರ್ಣಿ ಸೇನಾದ ಸದಸ್ಯನೋರ್ವ ಬನ್ಸಾಲಿ ಅವರ ಕಪಾಳಕ್ಕೆ ಹೊಡೆದಿದ್ದನು. ಇನ್ನೂ ಮಹಾರಾಷ್ಟ್ರದ ಕೋಲಾಪುರದಲ್ಲಿ ಚಿತ್ರೀಕರಣದ ಸೆಟ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಘಟನೆ ವೇಳೆ ಯಾರಿಗೂ ಯಾವುದೇ ಅಪಾಯವಾಗಿರಲಿಲ್ಲ.

 

ಹರ್ಯಾಣದ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಸೂರಜ್ ಪಾಲ್ ಅಮು, ಪದ್ಮಾವತಿ ಚಿತ್ರದ ನಟಿ ದೀಪಿಕಾ ಅವರ ಹಾಗೂ ನಿರ್ದೇಶಕ ಬನ್ಸಾಲಿ ಅವರ ಶಿರಚ್ಛೇದ ಮಾಡಿವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದರು. ಅಲ್ಲದೇ ಚಿತ್ರದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಪಾತ್ರವನ್ನು ಮಾಡಿರುವ ರಣವೀರ್ ಸಿಂಗ್ ರ ಕಾಲು ಮುರಿಯುತ್ತೇವೆ ಎಂದು ಬೆದರಿಕೆ ಹಾಕಿದ್ದರು.

ಬಿಜೆಪಿ ಆಡಳಿತ ಇರುವ ರಾಜಸ್ಥಾನ, ಮಧ್ಯಪ್ರದೇಶ ಜೊತೆ ಕಾಂಗ್ರೆಸ್ ಆಡಳಿತ ಇರುವ ಪಂಜಾಬ್ ಸರ್ಕಾರ ಪದ್ಮಾವತಿಯನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿವೆ.

 

 

 

 

https://twitter.com/deepikapadukone/status/910668862336544768

https://twitter.com/deepikapadukone/status/910673498376364033

Share This Article
Leave a Comment

Leave a Reply

Your email address will not be published. Required fields are marked *