ಅ.16ಕ್ಕೆ ಮಂಡ್ಯಗೆ ಯೋಗಿ ಆದಿತ್ಯನಾಥ್‌ ಭೇಟಿ

Public TV
1 Min Read

ಮಂಡ್ಯ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಅವರು ಅ.16ರಂದು ಮಂಡ್ಯ (Mandya) ಜಿಲ್ಲೆಗೆ ಆಗಮಿಸಲಿದ್ದು, ಕೆ.ಆರ್‌.ಪೇಟೆಯಲ್ಲಿ (K.R. Pet) ನಡೆಯುವ ಮಹಾಕುಂಭಮೇಳದಲ್ಲಿ (Maha Kumbh Mela) ಪಾಲ್ಗೊಳ್ಳಲಿದ್ದಾರೆ.

ಕೆ‌.ಆರ್‌. ಪೇಟೆಯ ತ್ರಿವೇಣಿ ಸಂಗಮದಲ್ಲಿ ಅ.13ರಿಂದ ಅ.16 ರ ವರೆಗೆ ಮಹಾಕುಂಭಮೇಳ ನಡೆಯಲಿದೆ. ಮಹಾಕುಂಭಮೇಳಕ್ಕೆ ಯೋಗಿ ಆದಿತ್ಯನಾಥ್‌ ಅವರಿಗೆ ಆಹ್ವಾನ ನೀಡಲಾಗಿದೆ. ಇದನ್ನೂ ಓದಿ: ಇಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಾಂಕೇತಿಕ ಚುನಾವಣೆ

ನಿನ್ನೆ ಲಖನೌನಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದ ಕ್ರೀಡಾ ಸಚಿವ ನಾರಾಯಣಗೌಡ‌‌‌ (Narayana Gowda) ಅವರು, ಮಹಾಕುಂಭಮೇಳಕ್ಕೆ ಆಹ್ವಾನ ನೀಡಿದ್ದರು. ಆಹ್ವಾನ‌ ಸ್ವೀಕರಿಸಿರುವ ಯೋಗಿ ಅವರು ಮಹಾಕುಂಭಮೇಳದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.

ಇದೇ ವೇಳೆ ಆದಿಚುಂಚನಗಿರಿ, ಧರ್ಮಸ್ಥಳದ ಇತಿಹಾಸ ಹಾಗೂ ನಾಥ ಪರಂಪರೆ ಬಗ್ಗೆ ನಾರಾಯಣಗೌಡರ ಜೊತೆ ಯೋಗಿ ಅವರು ಮಾತನಾಡಿ ತಿಳಿದುಕೊಂಡಿದ್ದಾರೆ. ಇದನ್ನೂ ಓದಿ: ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್‍ನ್ಯೂಸ್ – ಮೊದಲ ಬಾರಿಗೆ ಮಿನಿ ಎಲೆಕ್ಟ್ರಿಕ್ ಬಸ್ ಸೇವೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *