ನಮ್ಮ ಅಣ್ಣನಿಗೆ ಹೊಡೆದಿದ್ದೆ ಸಾಕು, ನನ್ನ ಬಿಟ್ಬಿಡಿ- ನಲಪಾಡ್ ಸಹೋದರ

Public TV
1 Min Read

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ನಲಪಾಡ್ ಗೆ ಇಂದು ಹೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ನಲಪಾಡ್ ಸಹೋದರ ಉಮರ್ ನಲಪಾಡ್ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ನಮ್ಮ ಅಣ್ಣನಿಗೆ ಹೊಡೆದಿದ್ದೆ ಸಾಕು, ನನ್ನ ಬಿಟ್ಬಿಡಿ ಅಂತ ಮಾಧ್ಯಮಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಅಲ್ಲದೇ ಮೊಹಮ್ಮದ್ ನಲಪಾಡ್ ಗೆ ಜಾಮೀನು ಸಿಕ್ಕಿದ್ದಕ್ಕೆ ಹರ್ಷ ವ್ಯಕ್ತಪಡಿಸಿ, ಮನೆಯ ಬಳಿ ಇದ್ದ ಸ್ನೇಹಿತರಿಗೆ ದೂರದಿಂದಲೇ ಶುಭಕೋರಿದ್ರು.  ಇದನ್ನೂ ಓದಿ: ಮೊಹಮ್ಮದ್ ನಲಪಾಡ್ ಸೆರೆವಾಸ ಅಂತ್ಯ – ವಕೀಲ ಶ್ಯಾಮ್ ಸುಂದರ್ ಹೇಳಿದ್ದು ಹೀಗೆ

ಇತ್ತ ಮಗನಿಗೆ ಜಾಮೀನು ಮಂಜೂರಾಗುತ್ತಿದ್ದಂತೆ ಹ್ಯಾರೀಸ್ ಮನೆಯಲ್ಲಿ ವಿಶೇಷ ಪ್ರಾರ್ಥನೆ ಮಾಡಿದ್ದಾರೆ. ಮಗನಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮೊಹಮ್ಮದ್ ನಲಪಾಡ್‍ಗೆ ಜಾಮೀನು ಮಂಜೂರು – ಹೈಕೋರ್ಟ್ ನಿಂದ ಷರತ್ತು ಬದ್ಧ ಬೇಲ್

ನಲಪಾಡ್ ಮನೆಗೆ ಬಂದಾಗ ಹೆಚ್ಚು ಜನ ಸೇರಬಾರದು. ಹೆಚ್ಚು ಜನ ಸೇರಿದ್ರೆ ಗಲಾಟೆಯಾಗ್ಬಹುದು. ಹೀಗಾಗಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಕಬ್ಬನ್ ಪಾರ್ಕ್ ಎಸಿಪಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *