ಸ್ನೇಹಿತನೊಂದಿಗೆ ಲೈಂಗಿಕವಾಗಿ ಸಹಕರಿಸುವಂತೆ ಹೇಳಿದ ಪ್ರಿಯಕರನ ವಿರುದ್ಧ ದೂರು

Public TV
1 Min Read

ಚಿತ್ರದುರ್ಗ: ತನ್ನ ಗೆಳೆಯನೊಂದಿಗೆ ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಿದ್ದ ಪ್ರಿಯಕರನ ವಿರುದ್ಧ ನೊಂದ ಯುವತಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ

ರಶ್ಮಿ (ಹೆಸರು ಬದಲಾಯಿಸಿದೆ) ಪ್ರಿಯಕರನ ವಿರುದ್ಧ ದೂರು ದಾಖಲಿಸಿದ ಯುವತಿ. ಪ್ರಕರಣ ದಾಖಲಾಗುತ್ತಿದ್ದಂತೆ ಪ್ರಿಯಕರ ಮತ್ತು ಆತನ ಸ್ನೇಹಿತ ನಾಪತ್ತೆಯಾಗಿದ್ದಾರೆ.

ಇದನ್ನೂ ಓದಿ: ಹಾಸಿಗೆಯಲ್ಲಿ ಗೆಳೆಯ ಇದ್ದಿದ್ದನ್ನು ಗಂಡ ನೋಡಿದ್ದಕ್ಕೆ ಅತ್ಯಾಚಾರ ಆರೋಪ ಹೊರಿಸಿದ್ಲು!

ಯುವತಿ ಆರೋಪ ಏನು?
ಹೊಳಲ್ಕೆರೆ ತಾಲೂಕಿನ ಕಾಲಗೆರೆ ಗ್ರಾಮದ ಮಂಜುನಾಥ್ ನನ್ನನ್ನು ಪ್ರೀತಿಸುತ್ತಿದ್ದ. ಆದರೆ ನನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ, ಚಿತ್ರದುರ್ಗ ತಾಲೂಕಿನ ಜಾನಕೊಂಡ ಗ್ರಾಮದ ಗೋಪಾಲ ಸ್ವಾಮಿ ದೇವಾಲಯದ ಬಳಿ ಅತ್ಯಾಚಾರ ನಡೆಸಿದ್ದ. ಇಷ್ಟಕ್ಕೆ ಸುಮ್ಮನಾಗದ ಮಂಜುನಾಥ್ ತನ್ನ ಯುವತಿಗೆ ಗೆಳೆಯ ನಾಗರಾಜ್‍ನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡುಗುವಂತೆ ಒತ್ತಾಯಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ಇದನ್ನೂ ಓದಿ: ನಡುರಸ್ತೆಯಲ್ಲಿ ಮಹಿಳಾ ಟೆಕ್ಕಿಗೆ ಕಿಸ್ ಕೊಟ್ಟ ಕಾಮುಕರು

ಪ್ರಕರಣ ದಾಖಲಾಗುತ್ತಿದ್ದಂತೆ ಮಂಜುನಾಥ್ ಮತ್ತು ನಾಗರಾಜ್ ಪರಾರಿಯಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಲಿವಿಂಗ್ ಟುಗೆದರ್ ಬಳಿಕ ಕೈಕೊಟ್ಟ ಪ್ರಿಯಕರ – ನಟಿಗೆ ದೋಖಾ?

 

Share This Article
Leave a Comment

Leave a Reply

Your email address will not be published. Required fields are marked *