ಸ್ನಾನ ಮಾಡಲು ಹೋಗಿದ್ದ ಯುವಕ ನೀರು ಪಾಲು

Public TV
1 Min Read

ಹಾವೇರಿ: ತುಂಗಾ ಮೇಲ್ದಂಡೆ ಕಾಲುವೆಯಲ್ಲಿ ಸ್ನಾನ ಮಾಡಲು ಹೋಗಿದ್ದ ಯುವಕ ನೀರು ಪಾಲಾದ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ನಡೆದಿದೆ.

ಯುವಕನನ್ನ 23 ವರ್ಷದ ರಾಮಣ್ಣ ಪರಶುಗೊಂಡ ಎಂದು ಗುರುತಿಸಲಾಗಿದೆ. ಗುರುವಾರ ದೇವರಗುಡ್ಡ ಗ್ರಾಮದ ಮಾಲತೇಶ ದೇವಸ್ಥಾನಕ್ಕೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ರಾಮಣ್ಣ ಪರಶುಗೊಂಡ ಸಂಬಂಧಿಕರೊಬ್ಬರ ಕಾರ್ಯಕ್ರಮದ ನಿಮಿತ್ತ ಮಾಲತೇಶ ದೇವಸ್ಥಾನಕ್ಕೆ ಬಂದಿದ್ದರು. ತುಂಗಾ ಮೇಲ್ದಂಡೆ ಕಾಲುವೆಯಲ್ಲಿ ಸ್ನಾನ ಮಾಡಲು ಹೋಗಿದ್ದರು. ಈ ವೇಳೆ ರಾಮಣ್ಣ ಕಾಲುಜಾರಿ ಕಾಲುವೆಯಿಂದ ಕೊಚ್ಚಿಕೊಂಡು ಹೋಗಿದ್ದಾರೆ. ಬಳಿಕ ಸ್ಥಳದಲ್ಲಿದ್ದವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ರಾಮಣ್ಣ ಪರಶುಗೊಂಡಗಾಗಿ ಶೋಧಕಾರ್ಯ ನಡೆಸಿದ್ದಾರೆ. ಈ ಘಟನೆ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *