5 ಲಕ್ಷ ರೂ. ನೀಡಿಯೂ ಉದ್ಯೋಗ ಸಿಗದ್ದಕ್ಕೆ ಬೇಸತ್ತು ಯುವಕ ಆತ್ಮಹತ್ಯೆ

Public TV
0 Min Read

ಬೆಂಗಳೂರು: ದೇವಸ್ಥಾನದ ಆವರಣದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ವಿರೇಶ್ ಆತ್ಮಹತ್ಯೆಗೆ ಶರಣಾದ ಯುವಕ. ನಗರದ ಪೀಣ್ಯದ ಬಡಾವಣೆಯ ದೇವಾಸ್ಥಾನದಲ್ಲಿ ವಿರೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿರೇಶ್ ಐಟಿಐ ಓದಿಕೊಂಡಿದ್ದನು. ನಗರದ ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಲು ತನಗೆ ಪರಿಚಯದ ವ್ಯಕ್ತಿಗೆ ಸುಮಾರು 5 ಲಕ್ಷ ರೂ. ಹಣವನ್ನು ನೀಡಿದ್ದನು.

ಹಣ ನೀಡಿದ ಮೇಲೆ ವಿರೇಶನಿಗೆ ಯಾವುದೇ ಉದ್ಯೋಗ ಸಿಕ್ಕಿರಲಿಲ್ಲ, ಇದ್ರಿಂದ ಮನನೊಂದ ವಿರೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article
Leave a Comment

Leave a Reply

Your email address will not be published. Required fields are marked *