ಊಟ ಮಾಡುವಾಗ ಗಂಟಲಲ್ಲಿ ಅನ್ನ ಸಿಲುಕಿ ಯುವಕ ಸಾವು

Public TV
1 Min Read

ಕಾರವಾರ: ಊಟ ಮಾಡುತ್ತಿದ್ದ ವೇಳೆ ಅನ್ನದ ಅಗಳು ಗಂಟಲಲ್ಲಿ ಸಿಲುಕಿ ಯುವಕ ಸಾವನ್ನಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ (Karwar) ತಾಲೂಕಿನ ಬಿಣಗಾದಲ್ಲಿ ನಡೆದಿದೆ.

ಬಿಣಗಾ ಮಾಳಸವಾಡ ನಿವಾಸಿ ಅಮಿತ್ ಮಾಳಸೇರ್ (38) ಮೃತ ದುರ್ದೈವಿ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಅಮಿತ್, ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರಿಂದ ಚಿಕಿತ್ಸೆಯನ್ನು ಸಹ ಪಡೆಯುತ್ತಿದ್ದರು. ಇದನ್ನೂ ಓದಿ: ಹೃದಯಾಘಾತ – ಸಿನಿಮಾ ರೈಟರ್ ಎಸ್.ಎಸ್ ಡೇವಿಡ್ ನಿಧನ

ಅಮಿತ್ ಭಾನುವಾರ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಅಗಳೊಂದು ಗಂಟಲಲ್ಲಿ ಸಿಲುಕಿತ್ತು. ತಕ್ಷಣ ಮನೆಯವರು ಅಮಿತ್‌ಗೆ ನೀರು ಕುಡಿಸಿದ್ದು, ಆತ ಅಲ್ಲೇ ಕುಸಿದು ಬಿದಿದ್ದ. ಕೂಡಲೇ ಆತನನ್ನು ಅಂಬುಲೆನ್ಸ್ ಮೂಲಕ ಕಾರವಾರದ ಕ್ರಿಮ್ಸ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ವೈದ್ಯರು ಪರೀಕ್ಷಿಸಿದಾಗ ಗಂಟಲಲ್ಲಿ ಅನ್ನದ ಅಗಳು ಸಿಲುಕಿ ಅಮಿತ್ ಮೃತಪಟ್ಟಿದ್ದಾನೆಂದು ದೃಢಪಡಿಸಿದ್ದಾರೆ. ಇದನ್ನೂ ಓದಿ: ಸದ್ದಿಲ್ಲದೇ ಹಾಸ್ಯನಟ ಚಿಕ್ಕಣ್ಣ ಮದ್ವೆ ನಿಶ್ಚಯ

ಘಟನೆ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article