ಗಣೇಶ ಮೆರವಣಿಗೆ ಡಿಜೆ ಶಬ್ದಕ್ಕೆ ಯುವಕ ಸಾವು – ಎಫ್‍ಐಆರ್ ದಾಖಲು

Public TV
1 Min Read

ಕೊಪ್ಪಳ: ಗಂಗಾವತಿ (Gangavathi) ನಗರದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ (Ganesha Procession) ವೇಳೆ ಡಿಜೆ ಶಬ್ದದಿಂದ ಹೃದಯಾಘಾತಕ್ಕೆ ಒಳಗಾಗಿ ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿಚಾರವಾಗಿ ಪ್ರಶಾಂತ ನಗರದ ಪರಶುರಾಮ ಮಡ್ಡೇರ, ಬಸವರಾಜ್ ತಾವರಗೇರಾ, ರವಿ ಪವಾರಶೆಟ್ಟಿ, ಡಿಜೆ ಮಾಲೀಕ ಸಂತೋಷ್ ಮುಧೋಳ, ಡಿಜೆ ಆಪರೇಟರ್ ಬೆಳಗಾವಿಯ ರಾಮದುರ್ಗದ ಶಿವಸಾಗರ್ ಮತ್ತು ಡಿಜೆ ಟ್ರಾಕ್ಟರ್ ಮಾಲೀಕ ಅಶೋಕ್ ಎಂಬುವವರ ಮೇಲೆ ಪ್ರಕರಣ ದಾಖಲಾಗಿದೆ. ಡಿಜೆ ಸಂಗೀತಕ್ಕೆ ಬಳಸುತ್ತಿದ್ದ ಉಪಕರಣ, ವಾಹನ ಸೇರಿ ಒಟ್ಟು 24 ಲಕ್ಷ ರೂ. ಮೌಲ್ಯದ ವಾಹನ ಮತ್ತು ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಡಿಜೆ ಸದ್ದಿಗೆ ಯುವಕನಿಗೆ ಹೃದಯಾಘಾತ

ಮೂರು ಲಕ್ಷ ರೂ. ಮೌಲ್ಯದ ಟ್ರ್ಯಾಕ್ಟರ್, 10 ಲಕ್ಷ ರೂ. ಮೌಲ್ಯದ ಲಾರಿ, 3 ಲಕ್ಷ ರೂ. ಮೌಲ್ಯದ ಜನರೇಟರ್ ಹಾಗೂ 9 ಲಕ್ಷ ರೂ. ಮೌಲ್ಯದ ಡಿಜೆ ಸಂಗೀತದ ನಾನಾ ಮಾದರಿಯ ಉಪಕರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಗಣೇಶನ ಹಬ್ಬದ ಅಂಗವಾಗಿ ಪ್ರಶಾಂತ ನಗರದ ಗಜಾನನ ಸಮಿತಿಯ ಸದಸ್ಯರು ಗಣೇಶನನ್ನು ಪ್ರತಿಷ್ಠಾಪಿಸಿದ್ದರು. ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ಮೆರವಣಿಗೆಯಲ್ಲಿ ಅನುಮತಿ ಪಡೆಯದೇ ಡಿಜೆ ಬಳಕೆ ಮಾಡಿದ್ದಾರೆ ಎಂದು ಎಎಸ್‍ಐ ಸಿದ್ದರಾಮಯ್ಯ ಎಂಬವರು ದೂರು ನೀಡಿದ್ದಾರೆ.

ಹೆಚ್ಚು ಶಬ್ದ ಮಾಡುವ ಸಾಧನಗಳನ್ನು ಬಳಸದಂತೆ ಸಾಕಷ್ಟು ಮುಂಚಿತವಾಗಿ ಪೊಲೀಸ್ ಠಾಣೆಯಲ್ಲಿ ಸಭೆ ಆಯೋಜಿಸಿ ಸೂಚನೆ ನೀಡಿದ್ದರು. ಬಳಿಕವೂ ಅನುಮತಿ ಇಲ್ಲದೇ ಡಿಜೆ ಬಳಕೆ ಮಾಡಿ ಜನರ ನೆಮ್ಮದಿಗೆ ಭಂಗ ತರುವ ಮತ್ತು ಶಬ್ದ ಮಾಲಿನ್ಯ ಉಂಟು ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಪ್ರೀತಿಸಿ ಯುವತಿಗೆ ವಂಚನೆ, ಮೂರು ಬಾರಿ ಗರ್ಭಿಣಿ – ವೈದ್ಯ ಅರೆಸ್ಟ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್