ಈಜು ಬಾರದೇ ಯುವಕ ಕೆರೆಯಲ್ಲಿ ಮುಳುಗಿ ಸಾವು

Public TV
1 Min Read

ಚಿಕ್ಕಮಗಳೂರು: ಸ್ನೇಹಿತರ ಜೊತೆ ಕೆರೆಗೆ ಇಳಿದಿದ್ದ ಯುವಕ ಈಜು ಬಾರದೇ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ನಲ್ಲೂರು (Nallur) ಗ್ರಾಮದಲ್ಲಿ ನಡೆದಿದೆ.

ಮೃತನನ್ನು ನಗರದ ಕೋಟೆ ನಿವಾಸಿಯಾದ ಹರ್ಷ (20) ಎಂದು ಗುರುತಿಸಲಾಗಿದೆ. ಮೃತ ಯುವಕ ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದ. ಹರ್ಷ ತನ್ನ ಸ್ನೇಹಿತರ ಜೊತೆ ಕೆರೆಗೆ ತೆರಳಿದ್ದ. ಈ ವೇಳೆ ಈಜು ಬಾರದೇ ಹರ್ಷ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಈ ವೇಳೆ ಜೊತೆಯಲ್ಲಿದ್ದ ಸ್ನೇಹಿತರು ಹರ್ಷನನ್ನು ಉಳಿಸಲು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಿಲ್ಲ. ಸ್ನೇಹಿತರ ಕಣ್ಣೆದುರೇ ಹರ್ಷ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ನಂತರ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹವನ್ನು ಕೆರೆಯಿಂದ ಹೊರ ತೆಗೆದಿದ್ದಾರೆ. ವಯಸ್ಸಿಗೆ ಬಂದಿದ್ದ, ಎದೆಮಟ್ಟಕ್ಕೆ ಬೆಳೆದ ಮಗನ ಶವ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಮಂಗಳೂರಿನ ಲೇಡಿಹಿಲ್‌ನಲ್ಲಿ ಕಾರು ಹಿಟ್ & ರನ್ – ಓರ್ವ ಯುವತಿ ಸಾವು, ನಾಲ್ವರಿಗೆ ಗಾಯ

ಘಟನೆ ಸಂಬಂಧ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ಕೆರೆಯಲ್ಲಿ ಕಳೆದ 15 ದಿನಗಳ ಹಿಂದಷ್ಟೇ ಕೂಲಿ ಕೆಲಸದ ಜೊತೆ ಉಪ ವೃತ್ತಿಯಾಗಿ ಡ್ಯಾನ್ಸ್ ಮಾಸ್ಟರ್ ಕೆಲಸ ಮಾಡುತ್ತಿದ್ದ ಸಂತೋಷ್ ಎಂಬ ಯುವಕ ಕೂಡ ಕುಡಿದ ಮತ್ತಿನಲ್ಲಿ ಇದೇ ಕೆರೆಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದ. ಇದನ್ನೂ ಓದಿ: ಡಿಕೆಶಿ ಹಸ್ತಕ್ಷೇಪಕ್ಕೆ ಸತೀಶ್ ಕಿಡಿ – ಕಾಂಗ್ರೆಸ್‌ಗೂ ಬೆಳಗಾವಿ ರಾಜಕೀಯ ಕಂಟಕನಾ?

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್