ಸ್ನಾನ ಮಾಡಲು ಹೋಗಿ ನದಿ ನೀರಲ್ಲಿ ಕೊಚ್ಚಿ ಹೋದ ಬೆಂಗಳೂರು ಯುವಕ

Public TV
1 Min Read

ಮಂಡ್ಯ: ಸ್ನಾನ ಮಾಡಲು ಹೋಗಿ ನದಿ ನೀರಲ್ಲಿ ಯುವಕನೊಬ್ಬ ಕೊಚ್ಚಿ ಹೋದ ಘಟನೆ ಮಂಡ್ಯದಲ್ಲಿ ನಡೆದಿದೆ.

ಅಶೋಕ್ (26) ನದಿಯಲ್ಲಿ ಕೊಚ್ಚಿಹೋದ ಯುವಕ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಸಂಗಮ ಬಳಿಯ ಕಾವೇರಿ ನದಿಯಲ್ಲಿ ಘಟನೆ ನಡೆದಿದೆ. ಬೆಂಗಳೂರಿನ ಯಲಹಂಕ ನಿವಾಸಿಯಾಗಿರುವ ಈತ ತನ್ನ ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಪೂಜೆಗಾಗಿ ಸಂಗಮಕ್ಕೆ ಆಗಮಿಸಿದಾಗ ಈ ದುರ್ಘಟನೆ ನಡೆದಿದೆ.

 

ಅಶೋಕ್ ಬೆಳಗ್ಗೆ ನದಿಯಲ್ಲಿ ಸ್ನಾನ ಮಾಡುವಾಗ ಕಾಲು ಜಾರಿ ಬಿದ್ದಿದ್ದಾನೆ. ಇದೇ ವೇಳೆ ನದಿ ನೀರಿನ ರಭಸ ಹೆಚ್ಚಿದ್ದ ಕಾರಣ ಕೊಚ್ಚಿಕೊಂಡು ಹೋಗಿದ್ದಾನೆ. ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಸೋತ – ಎಲೆಕ್ಷನ್‌ನಲ್ಲಿ ಹಂಚಿದ್ದ ಹಣ ಹಿಂದಿರುಗಿಸುವಂತೆ ಜನರನ್ನು ಪೀಡಿಸುತ್ತಿದ್ದವನ ವಿರುದ್ಧ FIR

ಸದ್ಯ 30ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ಕಾವೇರಿ ನದಿಯಲ್ಲಿ ಶೋಧ ನಡೆಸುತ್ತಿದ್ದಾರೆ. ಪ್ರತ್ಯೇಕ ತಂಡಗಳಾಗಿ ಶೋಧ ಬೋಟ್, ಪಾತಾಳ ಗರಡಿ ಬಳಸಿ ಹುಡುಕಾಡಿದ್ದಾರೆ. ಇತ್ತ ಸಂಗಮ ಬಳಿ ಅಶೋಕ್ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಭಾರೀ ಪ್ರಮಾಣದ ನೀರು ಹರಿದು ಬರತ್ತಿದ್ದರು ಕೂಡ ಯಾವುದೇ ಮುನ್ನೆಚ್ಚರಿಕೆ ಇಲ್ಲ ಎಂದು ಅಧಿಕಾರಿಗಳ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *