ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕನಿಗೆ ಗಾಯ

Public TV
1 Min Read

ಮಂಗಳೂರು: ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕನೊಬ್ಬನ ಕತ್ತಿಗೆ ಏಟು ಬಿದ್ದ ಘಟನೆಯೊಂದು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನಡೆದಿದೆ.

ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ (Mangaladevi Temple) ದೇವರ ಎದುರು ಹುಲಿವೇಷ ಧರಿಸಿ ಪ್ರದರ್ಶನದ ವೇಳೆ ಈ ಅವಘಡ ಸಂಭವಿಸಿದೆ. ಮುಳಿಹಿತ್ಲು ಎಂಬಲ್ಲಿನ ಹುಲಿವೇಷ ತಂಡದ ಕುಣಿತದ ವೇಳೆ ಹುಲಿವೇಷಧಾರಿಯೊಬ್ಬ ರಿವರ್ಸ್ ಪಲ್ಟಿ ಹೊಡೆಯುತ್ತಿದ್ದರು. ಈ ವೇಳೆ ಆಯತಪ್ಪಿ ತಲೆ ನೆಲಕ್ಕೆ ಬಡಿದು ಕತ್ತು ಉಳುಕಿದೆ.

ತಕ್ಷಣ ಆಸ್ಪತ್ರೆಗೆ ದಾಖಲಿಸಿ ಯುವಕನಿಗೆ ಚಿಕಿತ್ಸೆ ನೀಡಲಾಗಿದೆ. ಸದ್ಯ ಸಣ್ಣ ಗಾಯಗಳೊಂದಿಗೆ ಯುವಕ ಅಪಾಯದಿಂದ ಪಾರಾಗಿದ್ದಾರೆ. ನಿರಂತರ ಅಭ್ಯಾಸದ ಜೊತೆಗೆ ಹಲವು ವರ್ಷಗಳಿಂದ ಹುಲಿವೇಷ ಕಸರತ್ತು ನಡೆಸುತ್ತಿದ್ದರು. ಇದನ್ನೂ ಓದಿ: ಕಾಗೇರಿಗೊಂದು ನ್ಯಾಯ ಹೆಬ್ಬಾರ್‌ಗೊಂದು ನ್ಯಾಯ- ಸಿಡಿದೆದ್ದ ಹೆಬ್ಬಾರ್ ಅಭಿಮಾನಿಗಳು?

ಇದೀಗ ನವರಾತ್ರಿ ಹಿನ್ನೆಲೆ ಹುಲಿವೇಷ ಧರಿಸಿ ಕುಣಿತ ಮತ್ತು ಕಸರತ್ತು ಪ್ರದರ್ಶಿಸುವ ಸಂಪ್ರದಾಯವಿದೆ. ಅಂತೆಯೇ ಮಂಗಳಾದೇವಿ ದೇವರ ಎದುರು ಕಸರತ್ತು ನಡೆಸುತ್ತಿದ್ದ ವೇಳೆ ಭಾರೀ ಅವಘಡದಿಂದ ಪಾರಾಗಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್