ತಿರುಪತಿಗೆಂದು ಕರೆದೊಯ್ದು ರೈಲಿನಲ್ಲಿ ಲೈಂಗಿಕ ದೌರ್ಜನ್ಯ – ಯುವಕನಿಗೆ 5 ವರ್ಷ ಜೈಲು!

Public TV
1 Min Read

ಚಾಮರಾಜನಗರ: ದೇಗುಲ ದರ್ಶನಕ್ಕೆಂದು ಅಪ್ರಾಪ್ತೆಯನ್ನು ತಿರುಪತಿಗೆ ಕರೆದೊಯ್ದು ರೈಲಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಯುವಕನಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸದಾಶಿವ ಎಸ್ ಸುಲ್ತಾನಪುರಿ 5 ವರ್ಷ ಸಜೆ ವಿಧಿಸಲು ಆದೇಶಿಸಿದ್ದಾರೆ.

ಗುಂಡ್ಲುಪೇಟೆ ಪಟ್ಟಣ ನಿವಾಸಿ ಕುಮಾರ್ ಅಲಿಯಾಸ್ ಧ್ರುವ(19) ಎಂಬ ಯುವಕ ಶಿಕ್ಷೆಗೊಳಗಾದವ. ಕುಮಾರನು ಕೂಲಿ ಕಾರ್ಮಿಕನಾಗಿದ್ದು, 17 ವರ್ಷದ ಅಪ್ರಾಪ್ತೆಯನ್ನು ಪುಸಲಾಯಿಸಿ ಪ್ರೀತಿಸುವುದಾಗಿ ಪೀಡಿಸಿ ಕೊನೆಗೇ ದೇಗುಲಕ್ಕೆ ಹೋಗೋಣವೆಂದು 2019 ಫೆ.24 ರಂದು ತಿರುಮಲ ತಿರುಪತಿಗೆ ಕರೆದೊಯ್ದಿದ್ದಾನೆ. ಇದನ್ನೂ ಓದಿ: ಕೋರ್ಟ್ ಆದೇಶಕ್ಕೆ ತಲೆ ಬಾಗಿ ಬಂದಿದ್ದೇನೆ – ಸುಳ್ಯ ನ್ಯಾಯಾಲಯಕ್ಕೆ ಇಂದು ಡಿಕೆಶಿ ಹಾಜರು

ದೇವಾಲಯದಿಂದ ಹಿಂದಿರುಗಿ ರೈಲಿನಲ್ಲಿ ಮೈಸೂರಿಗೆ ಬರುವಾಗ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಲೈಂಗಿಕ ಕ್ರಿಯೆಗೆ ಪೀಡಿಸಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಯುವಕನಿಗೆ 5 ವರ್ಷ ಸಾದಾ ಸಜೆ 75 ಸಾವಿರ ರೂ. ದಂಡ ವಿಧಿಸಲು ನ್ಯಾಯಾಧೀಶರು ಆದೇಶಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತೆ ತಾಯಿ ಗುಂಡ್ಲುಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸರ್ಕಾರದ ಪರವಾಗಿ ಕೆ.ಯೋಗೇಶ್ ವಾದ ಮಂಡಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *