ಮದ್ಯದ ಅಮಲಿನಲ್ಲಿ ಹಳಿ ಮೇಲೆ ಮಲಗಿದ ಯುವಕರು; ರೈಲು ಹರಿದು ಮೂವರ ದುರ್ಮರಣ

Public TV
1 Min Read

ಕೊಪ್ಪಳ: ಮದ್ಯದ ಅಮಲಿನಲ್ಲಿ ಹಳಿ ಮೇಲೆ ಮಲಗಿದ್ದ ಯುವಕರ ಮೇಲೆ ರೈಲು (Train) ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳದ (Koppal) ಗಂಗಾವತಿ (Gangavati) ನಗರದಲ್ಲಿ ನಡೆದಿದೆ.

ಮೃತರನ್ನು ಗಂಗಾವತಿಯ ಹಿರೇಜಂತಕಲ್‌ನ ಸುನೀಲ್ (23), ವೆಂಕಟ ಭೀಮನಾಯ್ಕ (20) ಹಾಗೂ ಇಲಾಯಿ ಕಾಲೋನಿಯ ಮೌನೇಶ್ ಪತ್ತಾರ (23) ಎಂದು ಗುರುತಿಸಲಾಗಿದೆ. ಗುರುವಾರ ತಡರಾತ್ರಿ ಮೂವರು ಯುವಕರು ರೈಲ್ವೆ ಹಳಿ ಮೇಲೆ ಮದ್ಯಸೇವನೆ ಮಾಡಿ ಅಮಲಿನಲ್ಲಿ ಹಳಿ ಮೇಲೆಯೇ ಮಲಗಿದ್ದರು. ಇದನ್ನೂ ಓದಿ: ಮಳೆಯ ಆರ್ಭಟ – ಕೆಆರ್‌ಎಸ್‌ನಿಂದ ಯಾವುದೇ ಕ್ಷಣದಲ್ಲಾದರೂ ಕಾವೇರಿ ನದಿಗೆ ನೀರು!

ಇದೇ ಸಮಯಕ್ಕೆ ಹುಬ್ಬಳ್ಳಿಯಿಂದ ಸಿಂಧನೂರಿಗೆ ತೆರಳುವ ರೈಲು ಯುವಕರ ಮೇಲೆ ಹರಿದು ಹೋಗಿದೆ. ಈ ಪರಿಣಾಮ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಕುರಿತು ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇದೇನು ವಿಧಾನಸಭೆಯಾ, ನಿಮ್ಹಾನ್ಸಾ? – ಹಾಡು ಹೇಳಿದ ಬಿಜೆಪಿ ಶಾಸಕರ ವಿರುದ್ಧ ಸ್ಪೀಕರ್ ಗರಂ

Share This Article