ಅಡ್ವಾಣಿಗೆ ಶುಭಾಶಯ ಕೋರಿ ಬಿಜೆಪಿಗೆ ತಿವಿದ ಸಿದ್ದರಾಮಯ್ಯ

Public TV
1 Min Read

ಬೆಂಗಳೂರು: ಬಿಜೆಪಿ ಹಿರಿಯ ರಾಜಕಾರಣಿ ಲಾಲ್ ಕೃಷ್ಣ ಅಡ್ವಾಣಿ ಅವರು ಇಂದು ತಮ್ಮ 91ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅಡ್ವಾಣಿ ಅವರಿಗೆ ಶುಭಕೋರಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಅಡ್ವಾಣಿ ಅವರ ಹಿರಿತನ ಹಾಗೂ ಅನುಭಕ್ಕೆ ಸೂಕ್ತ ಗೌರವ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ ಅವರು, ಆತಂಕದಲ್ಲಿ ಇರುವ ಪ್ರಜಾಪ್ರಭುತ್ವದ ರಕ್ಷಣೆಗೆಗಾಗಿ ನಿಮ್ಮ ಮಾರ್ಗದರ್ಶನ ಅಗತ್ಯ. ಆದರೆ ಅಡ್ವಾಣಿ ಅವರ ಹಿರಿತನ ಹಾಗೂ ಅನುಭಕ್ಕೆ ಸೂಕ್ತಗೌರವ ಸಿಕ್ಕಿಲ್ಲ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಬಿಜೆಪಿ ಮುಖಂಡರನ್ನು ಟೀಕಿಸಿದ್ದಾರೆ.

ಅಡ್ವಾಣಿ ಅವರ ಹುಟ್ಟುಹಬ್ಬಕ್ಕೆ ಗಣ್ಯತಿ ಗಣ್ಯರು ಶುಭಕೋರಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ನಿರ್ಮಾಣದಲ್ಲಿ ಎಲ್ ಕೆ ಅಡ್ವಾನಿ ಅವರ ಕೊಡುಗೆ ಅಪಾರ. ಅವರ ನಿರ್ಧಾರಗಳು, ನೀತಿಗಳು ಮೆಚ್ಚುಗೆಗೆ ಒಳಪಟ್ಟಿದೆ ಎಂದು ತಿಳಿಸಿದ್ದಾರೆ.

ಉಳಿದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವ ಅರುಣ್ ಜೇಟ್ಲಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ. ಅಂದಹಾಗೇ ಎಲ್ ಕೆ ಅಡ್ವಾಣಿ ಅವರು 1927 ರಲ್ಲಿ ಕರಾಚಿಯಲ್ಲಿ ಜನಿಸಿದ್ದು, ಬಿಜೆಪಿಯ ಭೀಷ್ಮ ಎಂದೇ ಗುರುತಿಸಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

 

Share This Article
Leave a Comment

Leave a Reply

Your email address will not be published. Required fields are marked *