6 ತಿಂಗಳಾದ್ರೂ ಪತ್ನಿಗೆ ಸಂಬಳ ಬಂದಿಲ್ಲ ಎಂದ ವ್ಯಕ್ತಿಗೆ ಸೊಂಟ ಮುರಿಯುತ್ತೇನೆ ಎಂದು ಬೆದರಿಕೆ ಹಾಕಿದ ಸಚಿವ

Public TV
1 Min Read

ಭೋಪಾಲ್: ಮಧ್ಯಪ್ರದೇಶದ (Madhya Pradesh) ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೊಬ್ಬ ಕೇಳಿದ್ದ ಪ್ರಶ್ನೆಗೆ ರಾಜ್ಯ ಅರಣ್ಯ ಸಚಿವರೊಬ್ಬರು ಗರಂ ಆಗಿ, ಸೊಂಟ ಮುರಿಯುತ್ತೇನೆ ಎಂದು ಬೆದರಿಕೆ ಹಾಕಿದ ಘಟನೆ ನಡೆದಿದೆ.

ಮಧ್ಯಪ್ರದೇಶದ ಅರಣ್ಯ ಸಚಿವ ವಿಜಯ್ ಶಾ (Vijay Shah) ಅವರು ಸಾರ್ವಜನಿಕ ಕಾರ್ಯಕ್ರಮದ ನಿಮಿತ್ತ ಖಾಂಡ್ವಾ ಜಿಲ್ಲೆಗೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಕಾರ್ಯಕ್ರಮದ ವೇಳೆ ಇದ್ದಕ್ಕಿದ್ದಂತೆ ಎದ್ದು ನಿಂತು ಪ್ರಶ್ನೆ ಕೇಳಿದ್ದಾನೆ. ಅಂಗನವಾಡಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ತನ್ನ ಪತ್ನಿಗೆ ಕಳೆದ 6 ತಿಂಗಳಿಂದ ಸಂಬಳ ಬಂದಿಲ್ಲ ಎಂದು ಆರೋಪಿಸಿದ್ದಾನೆ.

ಇದರಿಂದಾಗಿ ಗರಂ ಆದ ಶಾಸಕರು ಆ ವ್ಯಕ್ತಿಯನ್ನು ಕುಡುಕನೆಂದು ನಿಂದಿಸಿದ್ದಾರೆ. ಅಷ್ಟೇ ಅಲ್ಲದೇ ಆತನಿಗೆ ಸೊಂಟ ಮುರಿಯುವುದಾಗಿ ಎಚ್ಚರಿಕೆಯನ್ನು ನೀಡಿದ್ದು, ನಂತರ ಪೊಲೀಸರನ್ನು ಕರೆಸಿ ಆತನನ್ನು ಕಾರ್ಯಕ್ರಮದಿಂದ ಹೊರಹಾಕಿದ್ದಾರೆ.

ಘಟನೆಗೆ ಸಂಬಂಧಿಸಿ ಕಾಂಗ್ರೆಸ್ (Congress) ವಿರುದ್ಧ ಕಿಡಿಕಾರಿದ ಸಚಿವರು, ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾಗದೇ ವಿಪಕ್ಷದವರು ಈ ರೀತಿ ಮಾಡುತ್ತಿದ್ದಾರೆ. ಆ ವ್ಯಕ್ತಿಯನ್ನು ಕಾಂಗ್ರೆಸ್‍ನವರು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮಾದಪ್ಪನ ದರ್ಶನಕ್ಕೆ ಭಕ್ತರ ದಂಡು- ಹಗ್ಗ ಹಿಡಿದು ನದಿ ದಾಟಿ ಬರುತ್ತಿರೋ ಜನ

ಮಧ್ಯಪ್ರದೇಶದಲ್ಲಿ ಅಭಿವೃದ್ಧಿಯ ಯುಗವನ್ನು ಪ್ರಾರಂಭಿಸುತ್ತಿದ್ದೇವೆ. ಆದರೆ ಇದಕ್ಕೆ ಅಡ್ಡಿ ಪಡಿಸುವರು ಯಾರೇ ಇದ್ದರೂ ಅವರ ಸೊಂಟವನ್ನು ಪೊಲೀಸರು ಮುರಿಯುತ್ತಾರೆ ಎಂದು ತಿಳಿಸಿದ್ದಾರೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅರಣ್ಯ ಸಚಿವರ ದರ್ಪಕ್ಕೆ ನೆಟ್ಟಿಗರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಶಾಸಕ ಸತೀಶ್ ರೆಡ್ಡಿ ಕೊಲೆಗೆ 2 ಕೋಟಿ ಸುಪಾರಿ – ಇಬ್ಬರು ಅರೆಸ್ಟ್, ವಿಲ್ಸನ್ ಗಾರ್ಡನ್ ನಾಗ ಪರಾರಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *