ನಿಮ್ಮ ಒಂದು ಮತ ದೇಶದ ಭವಿಷ್ಯವನ್ನು ಬದಲಾಯಿಸುತ್ತೆ – ತೇಜಸ್ವಿನಿ ಅನಂತ್‍ಕುಮಾರ್

Public TV
1 Min Read

ಬೆಂಗಳೂರು: ನಿಮ್ಮ ಒಂದು ಮತ ದೇಶದ ಭವಿಷ್ಯವನ್ನೇ ಬದಲಾವಣೆ ಮಾಡುತ್ತಿದೆ. ಹೀಗಾಗಿ ತಪ್ಪದೇ ಎಲ್ಲರೂ ಮತದಾನ ಮಾಡಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಹೇಳಿದ್ದಾರೆ.

ನಗರದ ಬಸವನಗುಡಿಯಲ್ಲಿರುವ ವಾಸವಿ ವಿದ್ಯಾನಿಕೇತನಕ್ಕೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ತಾನು ಹಾಗೂ ಕುಟುಂಬದ ಸದಸ್ಯರೆಲ್ಲರೂ ಅನಂತ್ ಕುಮಾರ್ ಜೊತೆಯೇ ಬಂದು ಮತದಾನ ಮಾಡುತ್ತಿದ್ದೆವು. ಆ ಒಂದು ಸಂದರ್ಭ ಇದೀಗ ನನಗೆ ನೆನಪಾಗುತ್ತಿದೆ ಎಂದು ತನ್ನ ಹಳೆಯ ನೆನಪನ್ನು ಮೆಲುಕು ಹಾಕಿಕೊಂಡರು.

ದೇಶದ ಸುಭದ್ರತೆ ಹಾಗೂ ಅಭಿವೃದ್ಧಿಗೆ ಇಂದು ನಾವು ಮತ ಹಾಕಲೇ ಬೇಕು. ದೇಶಕ್ಕಾಗಿ ಕೆಲಸ ಮಾಡಿರುವಂತಹ ಹಿರಿಯರ ಕುಟುಂಬದ ಸದಸ್ಯರಾಗಿ ದೇಶದ ಹಿತಕ್ಕಾಗಿಯೇ ಇಂದು ನಾವು ಮತ ನೀಡಿದ್ದೇವೆ ಎಂದರು.

ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕನ ಹಕ್ಕು. ವಿಶೇಷವಾಗಿ ಯುವಕ, ಯುವತಿ ಹಾಗೂ ಹಿರಿಯರ ಜವಾಬ್ದಾರಿಯಾಗಿದೆ. ನಮಗೆ ಇದು 5 ವರ್ಷಕ್ಕೊಮ್ಮೆ ಸಿಗುವ ಅವಕಾಶವಾಗಿದೆ. ನಮ್ಮ ಒಂದು ಮತಕ್ಕೆ ದೇಶದ ಭವಿಷ್ಯವನ್ನೇ ಬದಲಾವಣೆ ಮಾಡುವ ಶಕ್ತಿಯಿದೆ. ಆ ದೃಷ್ಟಿಯಿಂದ ಮತದಾನ ಮಾಡೋದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹೀಗಾಗಿ ಇದನ್ನು ಸರಿಯಾದ ರೀತಿಯಲ್ಲಿ ಎಲ್ಲರೂ ಬಳಸಿಕೊಳ್ಳಬೇಕು ಎಂದು ತಿಳಿಸಿದ್ರು.

Share This Article
Leave a Comment

Leave a Reply

Your email address will not be published. Required fields are marked *