ಪ್ರೀತಿ ವಿಚಾರಕ್ಕೆ ಕಿರಿಕ್ – ಶಿಕ್ಷಕಿಗೆ ಚಾಕು ಇರಿದು ಕೊಂದ ಯುವಕ

Public TV
1 Min Read

ಮೈಸೂರು: ಪ್ರೀತಿ (Love) ವಿಚಾರಕ್ಕೆ ಶಿಕ್ಷಕಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆಗೈದ ಘಟನೆ ಮೈಸೂರಿನ (Mysuru) ಅಶೋಕಪುರಂನಲ್ಲಿ ನಡೆದಿದೆ.

ಪಾಂಡವಪುರದ ಎಲೆಕೆರೆ ಹ್ಯಾಂಡ್ ಪೋಸ್ಟ್ ಮೂಲದ ಪೂರ್ಣಿಮಾ (36) ಹತ್ಯೆಯಾದ ಮಹಿಳೆ. ಕ್ಯಾತನಹಳ್ಳಿ ಗ್ರಾಮದ ಅಭಿಷೇಕ್ ಹತ್ಯೆ ಆರೋಪಿಯಾಗಿದ್ದಾನೆ. ಇದನ್ನೂ ಓದಿ: ಮಂಗಳೂರು | ಹಿಂದೂ ಮುಖಂಡನ ಮೊಬೈಲ್‍ನಲ್ಲಿ ಕರಾವಳಿ ರಾಜಕಾರಣಿಯ 50 ಅಶ್ಲೀಲ ವಿಡಿಯೋ!

ಶುಕ್ರವಾರ ಆರೋಪಿ, ಶಿಕ್ಷಕಿಗೆ ಚಾಕು ಇರಿದು ಪರಾರಿಯಾಗಿದ್ದ. ಚಾಕು ಇರಿತದಿಂದ ಗಾಯಗೊಂಡಿದ್ದ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಹಿಳೆ ಮೃತಪಟ್ಟಿದ್ದಾರೆ.

ಪ್ರೀತಿ ವಿಚಾರದಲ್ಲಿ ಕೋಪದಿಂದ ಯುವಕ ಮಹಿಳೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಎಂದು ತಿಳಿದುಬಂದಿದೆ. ಆರೋಪಿ ಅಭಿಷೇಕ್ ನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಲೇಡಿಸ್ ಬಾರ್‌ಗಳಲ್ಲಿ ನಿಯಮ ಉಲ್ಲಂಘನೆ – ಪ್ರತಿದಿನ ಸಿಸಿಟಿವಿ ಫೂಟೇಜ್ ಕೊಡುವಂತೆ ಸಿಸಿಬಿ ರೂಲ್ಸ್

Share This Article