ಸ್ನೇಹಿತರಿಗೆ ಕರೆ ಮಾಡಿ 19 ವರ್ಷದ ತರುಣ ನೇಣಿಗೆ ಶರಣು

Public TV
1 Min Read

ಕೋಲಾರ: ತನ್ನ ಸ್ನೇಹಿತರಿಗೆ ಕರೆ ಮಾಡಿ ಬಳಿಕ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ದೊಡ್ಡ ಶಿವಾರ ಗ್ರಾಮದಲ್ಲಿ ನಡೆದಿದೆ.

19 ವರ್ಷದ ಹೇಮಂತ್ ಕುಮಾರ್ ಆತ್ಮಹತ್ಯೆಗೆ ಶರಣಾದ ಯುವಕ. ಈತ ಪ್ರೇಮ ವೈಫಲ್ಯದಿಂದ ಮನನೊಂದು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಹೇಮಂತ್ ಕುಮಾರ್ ಮಾಲೂರು ಐಟಿಐ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಗ್ರಾಮದ ಹೊರವಲಯದಲ್ಲಿ ಮರಿಯಪ್ಪ ಎಂಬವರ ಜಮೀನಿನಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೇಣಿಗೆ ಶರಣಾಗುವುದಕ್ಕೂ ಮುನ್ನ ಈತ ತನ್ನ ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾನೆ. ಆದ್ರೆ ಆತ ಗೆಳೆಯಲ್ಲಿ ಏನು ಮಾತನಾಡಿದ್ದಾನೆ ಎಂದು ತಿಳಿದು ಬಂದಿಲ್ಲ.

ಈ ಬಗ್ಗೆ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *