ಕೇಂದ್ರ ರೈತ ವಿರೋಧಿ ನೀತಿಗೆ ಖಂಡನೆ- ದಾವಣಗೆರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ರೈಲು ತಡೆಗೆ ಯತ್ನ

Public TV
0 Min Read

ದಾವಣಗೆರೆ: ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ದಾವಣಗೆರೆಯಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ರೈಲು ತಡೆ ಯತ್ನ ನಡೆಸಲಾಯ್ತು.

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ, ಪ್ರಧಾನಿ ನರೇಂದ್ರ ಮೋದಿ ಆಡಳಿತ ವೈಫಲ್ಯ, ಹಾಗೂ ರೈತರ ಮೇಲೆ ನಡೆದ ಗೋಲಿಬಾರ್ ತೀವ್ರವಾಗಿ ಖಂಡಿಸಿದ್ರು. ಅಲ್ಲದೇ ನಗರದ ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲನ್ನು ತಡೆಯಲು ಕಾರ್ಯಕರ್ತರು ಯತ್ನಿಸಿದ್ರು.

ರೈಲು ತಡೆಗೆ ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ತಡೆದ ರೈಲ್ವೆ, ನಾಗರಿಕ ಪೊಲೀಸ್ ಹಾಗೂ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ರೈಲ್ವೆ ನಿಲ್ದಾಣದ ಹೊರಭಾಗದಲ್ಲಿ ಕಾರ್ಯಕರ್ತರನ್ನ ಬಂಧಿಸಿ ಕರೆದೊಯ್ದರು.

Share This Article
Leave a Comment

Leave a Reply

Your email address will not be published. Required fields are marked *