ಹೊಟ್ಟೆಗೆ ಚಾಕು ಇರಿತ- ಚಿಕಿತ್ಸೆ ಫಲಕಾರಿಯಾಗದೇ ಯುವಕ ದುರ್ಮರಣ

Public TV
1 Min Read

ಕೋಲಾರ: ಚಾಕು ಇರಿತಕ್ಕೆ ಒಳಗಾದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕೋಲಾರದಲ್ಲಿ ನಡೆದಿದೆ.

ಮೃತ ದುರ್ದೈವಿ ಯುವಕನನ್ನು 28 ವರ್ಷದ ಭರತ್ ಎಂದು ಗುರುತಿಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಶಿವು, ಶಿವರಾಜ್ ಭರತ್ ಗೆ ಚೂರಿ ಇರಿದಿದ್ದರು.

ಕೋಲಾರ ತಾಲೂಕಿನ ಖಾದ್ರಿಪುರ ಗ್ರಾಮದಲ್ಲಿ ಮೇ 21ರಂದು ಕ್ಷುಲ್ಲಕ ಕಾರಣಕ್ಕೆ ಶಿವು ಹಾಗೂ ಶಿವರಾಜ್ ಸೇರಿ ಭರತ್ ಗೆ ಚೂರಿ ಇರಿದಿದ್ದರು. ಹೊಟ್ಟೆ ಭಾಗಕ್ಕೆ ಚಾಕು ಇರಿದ ಪರಿಣಾಮ ಭರತ್ ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಆದ್ರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಭರತ್ ಮೃತಪಟ್ಟಿದ್ದಾರೆ.

ಭರತ್ ಫ್ಲಂಬಿಂಗ್ ಕೆಲಸ ಮಾಡುತ್ತಿದ್ದು, ರಾಜಶೇಖರ, ಶಿವು, ಶಿವರಾಜ್ ಜೊತೆ ಭರತ್ ನಡುವೆ ಮೊದಲಿನಿಂದಲೂ ಆಗಾಗ ಸಣ್ಣಪುಟ್ಟ ಗಲಾಟೆಗಳು ನಡೆಯುತಿತ್ತು. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಮೂವರು ಅರೋಪಿಗಳನ್ನ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *