ಗಣಪತಿ ವಿಸರ್ಜನೆ ವೇಳೆ ಯುವಕ ನೀರಿನಲ್ಲಿ ಮುಳುಗಿ ಸಾವು

Public TV
0 Min Read

ಶಿವಮೊಗ್ಗ: ಗಣಪತಿ ವಿಸರ್ಜನೆ ವೇಳೆ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಸೊರಬ ತಾಲೂಕಿನ ಕೈಸೋಡಿಯಲ್ಲಿ ಈ ಘಟನೆ ಸಂಭವಿಸಿದೆ. ಬೂಧೇಶ್ (22) ಮೃತ ದುರ್ದೈವಿ. ಗುರುವಾರ ರಾತ್ರಿ ತಮ್ಮ ಮನೆಯ ಮುಂದಿರುವ ಕೆರೆಗೆ ಗಣಪತಿ ವಿಸರ್ಜನೆಗೆ ಹೋದಾಗ ನೀರಿನಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ.

ಮೃತ ಬೂಧೇಶ್ ಅವರು ಕೃಷಿ ಕೆಲಸ ಮಾಡಿಕೊಂಡಿದ್ದರು. ಸದ್ಯ ಬೂಧೇಶ್ ಮೃತದೇಹ ಸಾಗರದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿದೆ. ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

Share This Article
Leave a Comment

Leave a Reply

Your email address will not be published. Required fields are marked *