ವಾಹನ ಹರಿದು ಯುವಕ ಸ್ಥಳದಲ್ಲೇ ಸಾವು

Public TV
1 Min Read

ಬೆಂಗಳೂರು: ನಗರದ ಮಲ್ಲತ್ತಹಳ್ಳಿ ಬಳಿ ರಸ್ತೆ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಬುಧವಾರ ತಡರಾತ್ರಿ ನೆಡೆದಿದೆ.

26 ವರ್ಷದ ನವೀನ್ ಮೃತ ದುರ್ಧೈವಿ ಬೈಕ್ ಸವಾರನಾಗಿದ್ದು, ಇವರು ಕೆಂಗೇರಿ ಉಪನಗರದ ನಿವಾಸಿಯಾಗಿದ್ದಾರೆ.

ಕಾಮಾಕ್ಷಿಪಾಳ್ಯದ ಕಡೆಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಬೈಕ್ ಪಕ್ಕದ ಡಿವೈಡರ್‍ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಸವಾರ ಮತ್ತೊಂದು ಬದಿಗೆ ಹಾರಿ ಬಿದಿದ್ದಾರೆ. ಇದೇ ಸಂದರ್ಭದಲ್ಲಿ ಬಂದ ಅಪರಿಚಿತ ವಾಹನವೊಂದು ನವೀನ್ ಮೇಲೆ ಹರಿದಿದೆ. ಪರಿಣಾಮ ನವೀನ್‍ಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸದ್ಯ ಮೃತ ನವೀನ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಶವಗಾರಕ್ಕೆ ರವಾನೆ ಮಾಡಲಾಗಿದೆ.

ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *