ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಯುವಕ ನೀರುಪಾಲು – ಮತ್ತೊಬ್ಬನಿಗಾಗಿ ಶೋಧ ಕಾರ್ಯ

Public TV
1 Min Read

ಬೀದರ್: ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಯುವಕ ನೀರುಪಾಲಾಗಿದ್ದು, ಮತ್ತೊಬ್ಬನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಬಳಿ ನಡೆದಿದೆ.

ಕಾಶಿನಾಥ್ ಪಾಟೀಲ್ (17) ಹಾಗೂ ನಾಗರಾಜ್ (16) ಸೆಲ್ಫಿ ಕ್ಲಿಕ್ಕಿಸಿಕೊಳ್ಳವ ವೇಳೆ ಕಾಲು ಜಾರಿ ಬಿದ್ದಿದ್ದಾರೆ. ಬೇಸಿಗೆ ರಜೆ ಇದ್ದ ಕಾರಣ ಕಾಶಿನಾಥ್ ಹಾಗೂ ನಾಗರಾಜ್ ದುಬಲಗುಂಡಿಯಿಂದ ಮಾವನ ಮನೆಗೆ ಬಂದಿದ್ದರು. ಈ ವೇಳೆ ಇಬ್ಬರು ಕಾರಂಜಾ ಡ್ಯಾಂನಲ್ಲಿ ಹತ್ತಿರ ನಿಂತುಕೊಂಡು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು.

ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವೇಳೆ ಇಬ್ಬರು ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ನೀರಿನಲ್ಲಿ ಬಿದ್ದ ಕಾಶಿನಾಥ್ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೋಷಕರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಬಗ್ಗೆ ಧನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *