ಯುವತಿ ಕಣ್ಣೆದುರೇ ಹೊಟ್ಟೆಗೆ ಚಾಕು ಚುಚ್ಚಿಕೊಂಡ ಯುವಕ

Public TV
1 Min Read

ಮಂಡ್ಯ: ಯುವತಿಯೊಬ್ಬಳು ತನ್ನ ಪ್ರೀತಿಯನ್ನ ನಿರಾಕರಿಸಿದಳು ಎಂಬ ಕಾರಣಕ್ಕೆ ಅವಳ ಎದುರೇ ಭಗ್ನ ಪ್ರೇಮಿ ತನ್ನ ಹೊಟ್ಟೆಗೆ ಚಾಕು ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ.

ಹಾಸನ ಮೂಲದ 29 ವರ್ಷದ ಯುವಕ ಉಮೇಶ್ ಆತ್ಮಹತ್ಯೆಗೆ ಯತ್ನಿಸಿದ ಭಗ್ನಪ್ರೇಮಿ. ಉಮೇಶನಿಗೆ ಯುವತಿ ಸಂಬಂಧಿಕಳೇ ಆಗಿದ್ದು ಹಲವು ವರ್ಷಗಳಿಂದ ಆಕೆಯನ್ನ ಪ್ರೀತಿ ಮಾಡುತ್ತಿದ್ದ. ಆದ್ರೆ ಯುವತಿ ಉಮೇಶನ ಪ್ರೀತಿ ನಿರಾಕರಿಸಿದ್ದಾಳೆ. ಇದರಿಂದ ಮಂಗಳವಾರ ರಾತ್ರಿ ಉಮೇಶ್ ಯುವತಿ ವಾಸವಿದ್ದ ರೂಮ್ ಬಳಿ ಬಂದಿದ್ದಾನೆ. ನನ್ನನ್ನು ಪ್ರೀತಿಸು, ಇಲ್ಲದಿದ್ರೆ ನಿನ್ನ ಕಣ್ಣೆದುರೇ ಸಾಯುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ.

ಯುವತಿ ಉಮೇಶನ ಮಾತಿಗೆ ಕರಗದಿದ್ದಾಗ, ಯುವಕ ಕೈಯಲ್ಲಿದ್ದ ಚಾಕುವಿನಿಂದ ಹೊಟ್ಟೆಗೆ ಚುಚ್ಚಿಕೊಂಡಿದ್ದಾನೆ. ಇದನ್ನ ಗಮನಿಸಿದ ಸ್ಥಳೀಯರು ತಕ್ಷಣ ಉಮೇಶನನ್ನ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article
Leave a Comment

Leave a Reply

Your email address will not be published. Required fields are marked *