ತುಂಬಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ಮೂವರ ದುಸ್ಸಾಹಸ – ಕೊಚ್ಚಿ ಹೋದ ಯುವಕ

Public TV
1 Min Read

ಮೈಸೂರು: ಜಿಲ್ಲೆಯ ನಂಜನಗೂಡಿನ ಹತ್ತಿರ ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ಮೂವರು ಯುವಕರು ನದಿಯಲ್ಲಿ ಸ್ವಿಮ್ಮಿಂಗ್ ಮಾಡುವ ದುಸ್ಸಾಹಸಕ್ಕೆ ಇಳಿದಿದ್ದರು. ಆದರೆ ಅವರಲ್ಲಿ ಒಬ್ಬ ಯುವಕ ನಾಪತ್ತೆಯಾಗಿದ್ದಾನೆ.

ಎಚ್.ಡಿ ಕೋಟೆ ತಾಲೋಕಿನ ಮಾದಾಪುರ ಸೇತುವೆ ಬಳಿ ಈ ಘಟನೆ ನಡೆದಿದೆ. ಸೇತುವೆ ಮೇಲೆ ಹರಿಯುತ್ತಿರುವ ನೀರಿಗೆ ಮೂವರು ಬಿದ್ದಿದ್ದರು. ಆದರೆ 24 ವರ್ಷದ ಉಮೇಶ್ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದಾನೆ. ಜೊತೆಯಲ್ಲಿದ್ದ ಚಿಕ್ಕನಾಯ್ಕ, ಸುರೇಶ್ ಪ್ರಾಣಾಪಾಯದಿಂದ ಪಾರಾಗಿದ್ದು, ಉಮೇಶ್‍ಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ತುಂಬಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ಯುವಕರ ದುಸ್ಸಾಹಸ!

ಭೋರ್ಗರೆದು ಹರಿಯುತ್ತಿರುವ ನೀರಿನಲ್ಲಿ ಯುವಕರು ಸ್ವಿಮ್ಮಿಂಗ್ ಮಾಡಲು ಪ್ರಾಣಾಪಾಯವನ್ನು ಲೆಕ್ಕಿಸದೇ ಇಂತಹ ದುಸ್ಸಾಹಸಕ್ಕೆ ಇಳಿದಿದ್ದರು. ಜಲಾಶಯ ತುಂಬಿದ್ದ ಪರಿಣಾಮ ಕಪಿಲಾ ನದಿಗೆ ಹೆಚ್ಚುವರಿಯಾಗಿ 50 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿತ್ತು.

ಎಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *