ತುಂಬಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ಯುವಕರ ದುಸ್ಸಾಹಸ!

Public TV
0 Min Read

ಮೈಸೂರು: ಜಿಲ್ಲೆಯ ನಂಜನಗೂಡಿನ ಹತ್ತಿರ ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ಯುವಕರು ನದಿಯಲ್ಲಿ ಸ್ವಿಮ್ಮಿಂಗ್ ಮಾಡುವ ದುಸ್ಸಾಹಸಕ್ಕೆ ಇಳಿದಿದ್ದಾರೆ.

ಭೋರ್ಗರೆದು ಹರಿಯುತ್ತಿರುವ ನೀರಿನಲ್ಲಿ ಯುವಕರು ಸ್ವಿಮ್ಮಿಂಗ್ ಮಾಡುತ್ತಿದ್ದು, ಪ್ರಾಣಾಪಾಯವನ್ನು ಲೆಕ್ಕಿಸದೇ ಇಂತಹ ದುಸ್ಸಾಹಸಕ್ಕೆ ಇಳಿದಿದ್ದಾರೆ. ಜಲಾಶಯ ತುಂಬಿದ್ದ ಪರಿಣಾಮ ಕಪಿಲಾ ನದಿಗೆ ಹೆಚ್ಚುವರಿಯಾಗಿ 50 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದೆ.

ಬುಧವಾರ ಇದೇ ರೀತಿ ಕಪಿಲ ನದಿಯಲ್ಲಿ ಈಜಲು ತೆರಳಿದ್ದ ಓರ್ವ ಯುವಕ ಜಲಸಮಾಧಿಯಾಗಿದ್ದ. ಇಂತಹ ಅವಘಡಗಳು ಸಂಭವಿಸುತ್ತಿದ್ದರೂ, ಯುವ ಜನತೆ ಎಚ್ಚರಗೊಳ್ಳದೆ, ಕೇವಲ ಕ್ರೇಜ್ ಗಾಗಿ ತಮ್ಮ ಜೀವವನ್ನೆ ಕಳೆದುಕೊಳ್ಳುತ್ತಿದ್ದಾರೆ. ಇಂದು ಪುನಃ ಯುವಕರು ಈಜಲು ನೀರಿಗೆ ಧುಮುಕಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *