ಪಾರ್ಟಿ ಮಾಡಲೆಂದು ಕರೆದೊಯ್ದು ಸ್ನೇಹಿತನ ಕೊಲೆ

Public TV
0 Min Read

ರಾಮನಗರ: ಪಾರ್ಟಿ ಮಾಡಲೆಂದು ಕರೆದೊಯ್ದು ಸ್ನೇಹಿತನನ್ನೇ ಕೊಲೆ ಮಾಡಿ ಶವವನ್ನು ಕಾರಿನಲ್ಲಿಟ್ಟು ಪರಾರಿಯಾಗಿರುವ ಘಟನೆ ಮಾಗಡಿಯ ಕೊಂಡಳ್ಳಿ ಗ್ರಾಮದಲ್ಲಿ ನಡೆದಿದೆ.

ರಾಮನಗರದ ಪುಟ್ಟರಾಜು ಎಂಬಾತನನ್ನು ಕೊಲೆ ಮಾಡಿದ ಸ್ನೇಹಿತರು ಬಳಿಕ ತಾವೇ ಪುಟ್ಟರಾಜುವಿನ ಸಹೋದರನಿಗೆ ಕರೆ ಮಾಡಿ, ಕೊಂಡಳ್ಳಿಯ ಬಳಿ ಸ್ವಿಫ್ಟ್ ಕಾರಿನ ಹಿಂಬದಿ ಸೀಟಿನಲ್ಲಿ ಪುಟ್ಟರಾಜುವಿನ ಶವವನ್ನ ಇಟ್ಟಿರುವುದಾಗಿ ತಿಳಿಸಿದ್ದಾರೆ.

ಮಾಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *