ವಿಮಾನ ನಿಲ್ದಾಣದಲ್ಲಿ ಜಗನ್ ಕೊಲೆಗೆ ಯತ್ನ!

Public TV
1 Min Read

ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ್ ರೆಡ್ಡಿ ಪುತ್ರ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಫೋರ್ಕ್‍ನಿಂದ ಹಲ್ಲೆ ನಡೆಸಿದ ಘಟನೆ ವಿಶಾಖಪಟ್ಟಣ ಏರ್‌ಪೋರ್ಟ್‌ನಲ್ಲಿ ನಡೆದಿದೆ.

ವಿಶಾಖಪಟ್ಟಣ ಏರ್‌ಪೋರ್ಟ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಜಗನ್ ಬಳಿ ಬಂದ ವ್ಯಕ್ತಿಯೊಬ್ಬ ಏಕಾಏಕಿ ತನ್ನ ಕೈಯಲ್ಲಿದ್ದ ಫೋರ್ಕ್‍ನಿಂದ ಹಲ್ಲೆ ನಡೆಸಿದ್ದಾನೆ. ಕೂಡಲೇ ಎಚ್ಚೆತ್ತಾ ಭದ್ರತಾ ಸಿಬ್ಬಂದಿಗಳು ಅವರನ್ನು ರಕ್ಷಿಸಿ, ಅನಾಮಿಕ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ದಾಳಿಯಿಂದ ಜಗನ್‍ಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಫೋರ್ಕ್‍ನಿಂದ ಚುಚ್ಚಿದ ರಭಸಕ್ಕೆ ಜಗನ್ ಭುಜಕ್ಕೆ ಗಾಯವಾಗಿದ್ದು, ಸ್ವಲ್ಪ ಪ್ರಮಾಣದ ರಕ್ತಸ್ರಾವವಾಗಿದೆ. ಕೂಡಲೇ ಏರ್‌ಪೋರ್ಟ್‌ನಲ್ಲಿದ್ದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಲಾಗಿದೆ. ಭದ್ರತಾ ಸಿಬ್ಬಂದಿ ಕೂಡಲೇ ಎಚ್ಚೆತ್ತುಕೊಂಡಿದ್ದರಿಂದ ಆಗಬಹುದಾಗಿದ್ದ ಭಾರೀ ದುರಂತ ತಪ್ಪಿದೆ.

ಕೂಡಲೇ ಎಚ್ಚೆತ್ತಾ ಏರ್‌ಪೋರ್ಟ್‌ ಭದ್ರತಾ ಸಿಬ್ಬಂದಿ ಅಪರಿಚಿತ ವ್ಯಕ್ತಿಯನ್ನು ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆ ಸಂಬಂಧ ಏರ್‍ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *