ಸ್ವಾಮೀಜಿ ಬಾಯಿಯಿಂದ ಎಂಜಲು ಅನ್ನವನ್ನು ತೆಗೆಸಿ ತಿಂದ ಶಾಸಕ ಜಮೀರ್

By
1 Min Read

ಬೆಂಗಳೂರು: ಚಾಮರಾಜಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ಸ್ವಾಮೀಜಿಯೊಬ್ಬರಿಗೆ ಕೈತುತ್ತು ತಿನ್ನಿಸಿ ಬಳಿಕ ಸ್ವಾಮೀಜಿ ಬಾಯಿಯಿಂದ ಎಂಜಲು ಅನ್ನವನ್ನು ತೆಗೆಸಿ ತಮ್ಮ ಬಾಯಿಗೆ ಹಾಕಿಸಿಕೊಂಡು ಶಾಸಕ ಜಮೀರ್ ಅಹ್ಮದ್ ಖಾನ್ ಅತಿರೇಕದ ವರ್ತನೆ ತೋರಿದ್ದಾರೆ.

ಚಾಮರಾಜಪೇಟೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಹಾಗೂ ಇದ್ ಮಿಲನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ದಲಿತ ಅಡುಗೆಯವರು ಮಾಡಿದ ಊಟ ಮಾಡಲು ಶಾಲಾ ಮಕ್ಕಳು ವಿರೋಧ ಮಾಡಿದ್ದರು. ಈ ಭೇದಭಾವ ಇರಬಾರದು ಎಂದರು. ಇದನ್ನೂ ಓದಿ: ಕುತುಬ್ ಮಿನಾರ್ ವಿವಾದ – ಸದ್ಯಕ್ಕಿಲ್ಲ ಉತ್ಖನನ

ಬಳಿಕ ದಲಿತ ಸಮುದಾಯದ ನಾಗರಾಜ ಸ್ವಾಮೀಜಿಯನ್ನು ಕರೆಸಿ ಜಮೀರ್ ಕೈತುತ್ತು ತಿನ್ನಿಸಿದರು. ನಂತರ ಸ್ವಾಮೀಜಿ ಕೈ ತುತ್ತು ತಿನ್ನಿಸಲು ಮುಂದಾದಾಗ ಕೈ ತುತ್ತು ಬೇಡ ನಿಮ್ಮ ಬಾಯಿಯಿಂದಲೇ ಕೊಡಿ ಎಂದು ಅವರ ಬಾಯಿಯಿಂದ ಎಂಜಲು ಅನ್ನ ತೆಗೆಸಿ ಬಹಿರಂಗವಾಗಿ ಎಂಜಲು ಅನ್ನ ತಿಂದರು. ಈ ವೀಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಇದನ್ನೂ ಓದಿ: ತಾಳಿ ಕಟ್ಟುವಾಗ ಕುಸಿದುಬಿದ್ದಂತೆ ವಧು ನಾಟಕ – ಕೊನೆ ಕ್ಷಣದಲ್ಲಿ ಮುರಿದುಬಿತ್ತು ಮದುವೆ

ವೀಡಿಯೋದಲ್ಲಿ ಏನಿದೆ?
ಯುಪಿನಲ್ಲಿ ಒಂದು ಸ್ಕೂಲ್ ಇತ್ತು ಸರ್, ಸರ್ಕಾರಿ ಸ್ಕೂಲ್, ಬಹಳ ವರ್ಷಗಳಿಂದ ದಲಿತರು ಅಡುಗೆ ಮಾಡುತ್ತಿದ್ದರು, ದಲಿತರು ಅಡುಗೆ ಮಾಡುತ್ತಿದ್ದಾರೆ ಅಂತಾ ಅಲ್ಲಿನ ಮಕ್ಕಳನ್ನು ಎತ್ತಿ ಕಟ್ಟಿ, ಇಲ್ಲಿ ಊಟ ಮಾಡಬಾರದು ಅಂತಾ ಗಲಾಟೆ ಮಾಡಿಸಿದ್ರು. ಆ ಮಕ್ಕಳನ್ನು ರಾಜಕೀಯ ಮಾಡಿ ಆ ಮಕ್ಕಳು ಊಟ ಬಿಟ್ಟಿದ್ದಾರೆ. ಏನ್ರಿ ಇದು ದೇಶ? ಏನ್ ಮಾಡೋಕೆ ಹೊರಟ್ಟಿದ್ದಾರೆ? ಏನ್ ಆಗ್ತಾ ಇದೇ? ಇವ್ರು ಸ್ವಾಮೀಜಿ ನಿಂತ್ಕೋಳಿ ಸ್ವಾಮೀಜಿ. ದಲಿತ ಸ್ವಾಮೀಜಿಗೆ ನಾನು ತಿನ್ನಿಸುತ್ತೇನೆ. ಒಂದ್ ನಿಮಿಷ… ಒಂದ್ ನಿಮಿಷ… ನಿಮ್ಮ ಬಾಯಲ್ಲಿ ಇರೋದನ್ನು ತೆಗೆದು ತಿನ್ನಿಸಿ. ಸ್ವಲ್ಪ ಅನ್ನ ತೆಗೆದು ನನಗೆ ಹಾಕಿ. ಇದು ರೀ… ಇದು ರೀ… ಇವ್ರ ಬಾಯಿಂದ ಅನ್ನ ತೆಗೆದು ತಿಂದಿದ್ದೀನಿ. ತಿಂದಿದ್ದೀನಿ ಅಲ್ವಾ? ಇದು ನಮ್ಮ ದೇಶ, ನಾವೆಲ್ಲಾರು ಒಂದೇ. ನಾವೆಲ್ಲಾರು ಒಂದೇ.

Share This Article
Leave a Comment

Leave a Reply

Your email address will not be published. Required fields are marked *