ಬಳ್ಳಾರಿ | ಪಿಯುಸಿ ಟಾಪರ್‌ಗಳಿಗೆ ಸ್ಕೂಟಿ ಜೊತೆ 5 ಲಕ್ಷ ಸಹಾಯ ಮಾಡಿದ ಜಮೀರ್

Public TV
1 Min Read

ಬಳ್ಳಾರಿ: ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಟಾಪರ್ ಆದ ವಿಜಯನಗರ (Vijayanagara) ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ವಿಜಯನಗರ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ವೈಯಕ್ತಿಕವಾಗಿ ತಲಾ ಐದು ಲಕ್ಷ ರೂ. ಹಾಗೂ ದ್ವಿಚಕ್ರ ವಾಹನ ಬಹುಮಾನ ನೀಡಿ ಸನ್ಮಾನಿಸಿದ್ದಾರೆ.

ಅಲ್ಲದೇ ಜಿಲ್ಲೆಯಲ್ಲಿ ಉತ್ತಮ ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂ. ನಗದು ನೀಡಿದ್ದಾರೆ. ಪಿಯುಸಿ ಕಲಾ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದ ಸಂಜನಾಬಾಯಿ ಹಾಗೂ 600ಕ್ಕೆ 596 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದ ನಿರ್ಮಲಾ ಇಬ್ಬರೂ ಬಡತನದಲ್ಲೇ ಹುಟ್ಟಿ, ಬೆಳೆದಿದ್ದ ವಿದ್ಯಾರ್ಥಿನಿಯರು. ಹೀಗಾಗಿ ವಿದ್ಯಾರ್ಥಿನಿಯರ ಮುಂದಿನ ಶೈಕ್ಷಣಿಕ ಜೀವನಕ್ಕೆ ಅನುಕೂಲ ಆಗಲಿ ಎಂಬ ಸದುದ್ದೇಶದಿಂದ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸನ್ಮಾನಿಸಿ, ಸಹಾಯ ಮಾಡಿದ್ದಾರೆ. ಇದನ್ನೂ ಓದಿ: ತುಮಕೂರಲ್ಲಿ ಎರಡು ದಿನಗಳ ಕಾಲ ಮಳೆ ಮುನ್ಸೂಚನೆ – ಯೆಲ್ಲೋ ಅಲರ್ಟ್ ಘೋಷಣೆ

ಈ ವೇಳೆ ಶಾಸಕರಾದ ಗವಿಯಪ್ಪ, ಲತಾ ಮಲ್ಲಿಕಾರ್ಜುನ, ಶ್ರೀನಿವಾಸ್, ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ದಿವಾಕರ್, ಎಸ್ ಪಿ ಹರಿಬಾಬು ಉಪಸ್ಥಿತರಿದ್ದರು. ಇದನ್ನೂ ಓದಿ: ದಾವಣಗೆರೆ | ಬ್ಲಡ್‌ ಕ್ಯಾನ್ಸರ್‌ನೊಂದಿಗೆ ಹೋರಾಡಿ ಎಸ್ಎಸ್ಎಲ್‌ಸಿಯಲ್ಲಿ ಶಾಲೆಗೆ ಫಸ್ಟ್ ಬಂದ ವಿದ್ಯಾರ್ಥಿನಿ

Share This Article