ಮಡಿಕೇರಿ: ದೇವೇಗೌಡರದ್ದು ಬ್ಲಾಕ್ ಮೇಲ್ ತಂತ್ರವಾಗಿದೆ. ಕಾಂಗ್ರೆಸ್ಗೆ ಬ್ಲಾಕ್ ಮೇಲ್ ಮಾಡಿ ಸೀಟಲ್ಲಿ ಗಟ್ಟಿಯಾಗಿ ಕೂರೋ ಪ್ಲಾನ್ ಇದಾಗಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ವಿರುದ್ಧ ಹಾಲಿ ಶಾಸಕ ಅಪ್ಪಚ್ಚು ರಂಜನ್ ಟೀಕೆ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಧ್ಯಂತರ ಚುನಾವಣೆ ನಡೆಯಬಹುದು ಎಂಬ ಮಾಜಿ ಪ್ರಧಾನಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದೇವೇಗೌಡರು ಪ್ರಧಾನಿ, ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾಗಿದ್ದವರು. ಹೀಗಾಗಿ ಅವರಿಗೆ ಎಲ್ಲಾ ರೀತಿಯ ಸ್ಟ್ರಾಟಜಿ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಇತ್ತ ಸಿದ್ದರಾಮಯ್ಯ ಅವರಿಗೂ ಒಂದು ರೀತಿಯಲ್ಲಿ ಬೇಕಾಗುವಂತ ಕೆಲಸವನ್ನು ಮಾಡುತ್ತಾರೆ. ಒಟ್ಟಿನಲ್ಲಿ ಸ್ಟ್ರಾಟಜಿ ಅನುಭವದಿಂದ ಒಂದು ರೀತಿಯಲ್ಲಿ ಬ್ಲಾಕ್ ಮಾಡಿಕೊಂಡು ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆಗಳನ್ನು ಹೇಳಿಕೊಂಡು ಬರುತ್ತಿದ್ದಾರೆ ಎಂದರು.
ಒಂದು ವೇಳೆ ಮಧ್ಯಂತರ ಚುನಾವಣೆ ನಡೆದರೆ ಇನ್ನು ಕೂಡ ಸರ್ಕಾರಕ್ಕೆ ಹೊರೆಯಾಗಲಿದೆ. ಹೀಗಾಗಿ ಇನ್ನೂ 4 ವರ್ಷ ಚುನಾವಣೆ ಆಗಬಾರದು. ಇವರಿಗೆ ಸರ್ಕಾರ ನಡೆಸಲು ಸಾಧ್ಯವಾಗಿಲ್ಲವಾದ್ರೆ ರಾಜೀನಾಮೆ ಕೊಡಲಿ. ಬಿಜೆಪಿ ಸರ್ಕಾರವೇ ಬರಬೇಕು ಎಂದು ಜನರ ಆದೇಶವಿತ್ತು. ಯಾಕಂದ್ರೆ ಬಿಜೆಪಿ ಸರ್ಕಾರದಲ್ಲಿ 104 ಇದ್ದಿದ್ದು, 105 ಆಗಿದೆ. ಸುಮಾರು ಶೇ.45ರಷ್ಟು ವೋಟು ಕೂಡ ಬಿಜೆಪಿಗೆ ಸಿಕ್ಕಿದೆ. ಬಿಜೆಪಿ ಸರ್ಕಾರವೇ ಬರಬೇಕು ಎಂಬುದು ಕರ್ನಾಟಕ ಜನರ ಚಿಂತನೆಯಾಗಿದೆ. ಹೀಗಾಗಿ ರಾಜೀನಾಮೆ ಕೊಡುವ ಕೆಲಸವನ್ನು ಅವರು ಮೊದಲು ಮಾಡಲಿ. ಸರ್ಕಾರದಿಂದ ಹೊರಗುಳಿದು ಯಾರು ಹೆಚ್ಚು ಗೆದ್ದಿದ್ದಾರೆ ಅವರಿಗೆ ಸರ್ಕಾರ ನಡೆಸಲು ಅವಕಾಶ ಕೊಡುವ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]