ಬೆಂಗಳೂರು: ಎಲೆ ಚುಕ್ಕೆ ರೋಗ ಮತ್ತು ಹಳದಿ ರೋಗ ಪರಿಹಾರವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ (SS Mallikarjun) ತಿಳಿಸಿದರು.ಇದನ್ನೂ ಓದಿ: ಯಶ್, ಸುದೀಪ್ ಬಂದ್ರೆ ಸಮಸ್ಯೆ ಆಗುತ್ತದೆ: ಸಾಧುಕೋಕಿಲ
Advertisement
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಪ್ರಶ್ನಿಸಿ, ರಾಜ್ಯದ ಕರಾವಳಿ ಭಾಗಗಳಲ್ಲಿ ಅಡಿಕೆಗೆ ಎಲೆ ಚುಕ್ಕೆ ರೋಗ, ಹಳದಿ ರೋಗ ಬಂದಿದೆ. ಸರ್ಕಾರ ರೈತರಿಗೆ ಪರಿಹಾರ ಸರಿಯಾಗಿ ಕೊಟ್ಟಿಲ್ಲ. ಕೇಂದ್ರ ಸರ್ಕಾರ 60% ಅನುದಾನ ಕೊಟ್ಟಿದ್ದರು. ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು. ಸರ್ಕಾರ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.
Advertisement
ಇದಕ್ಕೆ ಸಚಿವ ಎಸ್ಎಸ್ ಮಲ್ಲಿಕಾರ್ಜುನ ಉತ್ತರ ನೀಡಿ, ಕೇಂದ್ರದಿಂದ ಹಣ ಬಂದಿದೆ. ರಾಜ್ಯದ ಹಣ ಸೇರಿಸಿ ಶೀಘ್ರವೇ ಪರಿಹಾರದ ಹಣ ಬಿಡುಗಡೆ ಮಾಡ್ತೀವಿ. ಪ್ರತಿ ಹೆಕ್ಟೇರ್ಗೆ ಈಗ 1,200 ರೂ. ಪರಿಹಾರ ಕೊಡುತ್ತಿದ್ದೇವೆ. ಪರಿಹಾರ ಜಾಸ್ತಿ ಮಾಡುವ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಕೇಂದ್ರದಿAದ ಉತ್ತರ ಬಂದ ಕೂಡಲೇ ಪರಿಹಾರ ಹೆಚ್ಚು ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.ಇದನ್ನೂ ಓದಿ: ಸ್ಲಿಮ್ ಆಗಿರೊರೇ ಬೇಕಿದ್ರೆ ಮಾಡೆಲ್ ಆಯ್ಕೆ ಮಾಡಿಕೊಳ್ಳಿ – ರೋಹಿತ್ ದಪ್ಪ ಎಂಬ ಶಮಾ ಹೇಳಿಕೆಗೆ ಗವಾಸ್ಕರ್ ಆಕ್ಷೇಪ
Advertisement
Advertisement