Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಅಪ್ಪು ಕಪ್ ಸೀಸನ್ 2: ಟ್ರೋಫಿ ಅನಾವರಣ ಮಾಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

Public TV
Last updated: July 15, 2024 2:17 pm
Public TV
Share
3 Min Read
FotoJet 1 22
SHARE

ಓರಾಯನ್ ಮಾಲ್ ನ ಹೊರಾಂಗಣದಲ್ಲಿ ತಣ್ಣನೆ ಬೀಸುತ್ತಿದ್ದ ಗಾಳಿ. ಪಕ್ಕದಲ್ಲೊಂದು ಕೆರೆ. ಆ ಸುಂದರ ಪರಿಸರದಲ್ಲೊಂದು ವರ್ಣರಂಜಿತ ವೇದಿಕೆ. ಆ ವೇದಿಕೆಯಲ್ಲಿ ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿರುವ ʻಅಪ್ಪು ಕಪ್ ಸೀಸನ್ 2ʼ (ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಅಪ್ಪು ಸಂಭ್ರಮ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ಅವರು ನಿರ್ಮಿಸಿರುವ 5 ಕೆಜಿ ತೂಕದ ಅಪ್ಪು ಭಾವಚಿತ್ರವುಳ್ಳ ಬೆಳ್ಳಿ ಕಪ್ ಅಶ್ವಿನಿ ಪುನೀತ್ ರಾಜ್‍ಕುಮಾರ್ ಹಾಗೂ ಶ್ರೀಮುರಳಿ ಅವರಿಂದ ಅನಾವರಣವಾಯಿತು. ರಾಮನಗರ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಸಾ.ರಾ.ಗೋವಿಂದು ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

FotoJet 38

ಟ್ರೋಫಿ ಅನಾವರಣಗೊಳಿಸಿ ಮಾತನಾಡಿದ ಅಶ್ವಿನಿ ಪುನೀತ್ ರಾಜಕುಮಾರ್ (Ashwini Puneeth Rajkumar), ಶೆಟಲ್ ಆಟ, ಅಪ್ಪು ಅವರ ಮೆಚ್ಚಿನ ಆಟ. ಕಳೆದವರ್ಷದಿಂದ ಅಪ್ಪು ಕಪ್ ಟೂರ್ನಿಯನ್ನು ಚೇತನ್ ಅವರು ಚೆನ್ನಾಗಿ ಆಯೋಜಿಸಿಕೊಂಡು ಬರುತ್ತಿದ್ದಾರೆ. ಅವರಿಗೆ ಹಾಗೂ ಭಾಗವಹಿಸಿರುವ ಎಲ್ಲರಿಗೂ ಒಳ್ಳೆಯದಾಗಲಿ ಎಂದರು.

FotoJet 2 14

ಯಾವುದಾದರೂ ಆಟದ ನೆಪದಲ್ಲಿ ಕಲಾವಿದರನ್ನು ಒಟ್ಟಾಗಿ ಸೇರಿಸುವ ಆಸೆ ಅಪ್ಪು ಅವರಿಗಿತ್ತು. ಅದು ಹೊರದೇಶದಲ್ಲಿ ಅದನ್ನು ನಡೆಸಬೇಕೆಂಬುದು ಅವರ ಯೋಚನೆಯಾಗಿತ್ತು. ಸದಾ ಒಬ್ಬರಿಗೆ ಒಳೆಯದನ್ನೇ ಬಯಸುವ ಹೃದಯ ಅವರಿಗಿತ್ತು. ಅಂತಹ ಪುನೀತ್ ರಾಜಕುಮಾರ್ ಅವರ ನೆನಪಿನಲ್ಲಿ ನಡೆಯುತ್ತಿರುವ ಅಪ್ಪು ಕಪ್ ಸೀಸನ್ 2 ಯಶಸ್ವಿಯಾಗಲಿ ಎಂದು ನಟ ಶ್ರೀಮುರಳಿ ಹಾರೈಸಿದರು. ಇದನ್ನೂ ಓದಿ:ಕಾಪಿರೈಟ್ ವಿಚಾರವಾಗಿ ನೋಟಿಸ್ ಬಂದಿಲ್ಲ ಎಂದ ರಕ್ಷಿತ್ ಶೆಟ್ಟಿ ನಿರ್ಮಾಣ ಸಂಸ್ಥೆ

FotoJet 3 7

ನಾಡು ಕಂಡ ಶ್ರೇಷ್ಠ ನಟ ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ನಡೆಯುತ್ತಿರುವ ಈ ʻಅಪ್ಪು ಕಪ್ʼ ಶೆಟಲ್ ಬ್ಯಾಡ್ಮಿಂಟನ್ ಟೂರ್ನಿಯ ಬಗ್ಗೆ ಚೇತನ್ ಸೂರ್ಯ ಅವರು ಹೇಳಿದಾಗ ಬಹಳ ಸಂತೋಷವಾಯಿತು. ನಾನು ಮೊದಲೇ ತಿಳಿಸಿದಂತೆ ಈ ಟೂರ್ನಿಯ ಮೊದಲ ವಿಜೇತರಿಗೆ ನೂರು ಗ್ರಾಂ ಬಂಗಾರ, ದ್ವಿತೀಯ ವಿಜೇತರಿಗೆ ಐವತ್ತು ಗ್ರಾಮ್ ಬಂಗಾರ ಹಾಗೂ ಮೂರನೇ ವಿಜೇತರಿಗೆ ಇಪ್ಪತ್ತೈದು ಗ್ರಾಮ್ ಬಂಗಾರವನ್ನು ಬಹುಮಾನ ನೀಡುವುದಾಗಿ ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ತಿಳಿಸಿದರು. ನಾವು ಕಳೆದ ವರ್ಷದಿಂದ ಆಯೋಜಿಸುತ್ತಿರುವ ʻಅಪ್ಪು ಕಪ್ʼಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಸಹಕಾರ ನೀಡಿರುವುದು ಬಹಳ ಖುಷಿಯಾಗಿದೆ‌. ಶ್ರೀಮುರಳಿ ಅವರು ಹೇಳಿದಂತೆ ಮುಂದಿನ ವರ್ಷ ಹೊರದೇಶದಲ್ಲಿ ಈ ಟೂರ್ನಿಯ ಸೆಮಿಫೈನಲ್ ಹಾಗೂ ಫೈನಲ್ ಆಯೋಜಿಸಲು ಪ್ರಯತ್ನ ಪಡುತ್ತೇನೆ‌. ಈ ಬಾರಿ ಟೂರ್ನಿಯಲ್ಲಿ ಹತ್ತು ತಂಡಗಳಿದೆ. ಹತ್ತು ತಂಡಗಳ ಮಾಲೀಕರಿಗೆ, ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ಅವರಿಗೆ ಹಾಗೂ ಎಲ್ಲಾ ತಂಡಗಳ ಮಾಲೀಕರಿಗೆ, ಆಟಗಾರರಿಗೆ ಧನ್ಯವಾದ ತಿಳಿಸಿದ ʻಅಪ್ಪು ಕಪ್ʼ ನ ರುವಾರಿ ಚೇತನ್ ಸೂರ್ಯ, ಜುಲೈ 26, 27, 28 ಬೆಂಗಳೂರಿನಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದರು.

FotoJet 4 2

ಇದೇ ಸಂದರ್ಭದಲ್ಲಿ ಹತ್ತು ತಂಡಗಳ ಲೋಗೊ, ಜರ್ಸಿ ಅನಾವರಣ ಮಾಡಿ, ತಂಡದ ಮಾಲೀಕರ ಹಾಗೂ ಆಟಗಾರರ ಪರಿಚಯ ಮಾಡಿಕೊಡಲಾಯಿತು. ಅಲೋಕ್, ಸಮರ್ಜಿತ್ ಲಂಕೇಶ್, ಐಶ್ವರ್ಯ ಸಿಂದೋಗಿ, ಅಭಿಲಾಶ್ ದಳಪತಿ, ಕಾವ್ಯ ಶಾ, ಶರತ್ ಕ್ಷತ್ರಿಯ, ದಿಲೀಪ್ ಕೆಂಪೇಗೌಡ, ಸಿರಿ ರಾಜು, ರಾಮ್ ಪವನ್, ಐಶಾನ, ಲಾವಣ್ಯ, ದೇವನ್, ರಾಘವ್ ನಾಗ್, ಸುನಾಮಿ ಕಿಟ್ಟಿ, ವಿಜಯ್ ಸಿದ್ದರಾಜ್, ವ್ಯಾಸರಾಜ ಸೋಸಲೆ, ಜ್ಯೋತಿ ವ್ಯಾಸರಾಜ್ ಸೇರಿದಂತೆ ಹೆಸರಾಂತ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಿತು. “ಅಪ್ಪು ಕಪ್” ನಲ್ಲಿ ಆಡುತ್ತಿರುವ ತಂಡಗಳು ಹೀಗಿದೆ.

1) ಅರಸು ಹಂಟರ್ಸ್ ಮಾಲೀಕರು ಆನಂದ್ (PRO Win management). 2) ಬಿಂದಾಸ್ ರಾಯಲ್ ಚಾಲೆಂಜರ್ಸ್ ಮಾಲೀಕರು ಪರಿತೋಷ್ ಮೂರ್ತಿ (Oirgin Ventures), ನಾಯಕ ರವಿ ಚೇತನ್. 3) ಪವರ್ ಪೈತಾನ್ಸ್ ಮಾಲೀಕರು ಐಶ್ವರ್ಯ (SN Jals Events), ‌ನಾಯಕ ಸದಾಶಿವ ಶೆಣೈ. 4) ದೊಡ್ಮನೆ ಡ್ರಾಗನ್ಸ್ ಮಾಲೀಕರು ಮಹೇಶ್ ಗೌಡ,(MKJ Group), ನಾಯಕ ಪ್ರಮೋದ್ ಶೆಟ್ಟಿ. 5) ಜಾಕಿ ರೈಡರ್ಸ್ ಮಾಲೀಕರು ಶ್ರೀಹರ್ಷ(Sri Entertainments), ನಾಯಕ ಮನು ರವಿಚಂದ್ರನ್, 6) ರಾಜಕುಮಾರ ಕಿಂಗ್ಸ್ (Kings Club), ಮಾಲೀಕರು ವಿ.ರವಿಕುಮಾರ್ & ಶಂಶುದ್ದೀನ್, ನಾಯಕ ವಿಕ್ರಮ್ ರವಿಚಂದ್ರನ್, 7) ಗಂಧದಗುಡಿ ವಾರಿಯರ್ಸ್ ಮಾಲೀಕರು ಡಾ||ಚೇತನ ಆರ್ ಎಸ್,(Kalaluha), ನಾಯಕ ಭುವನ್ ಗೌಡ, 8)ವೀರ ಕನ್ನಡಿಗ ಬುಲ್ಸ್ ಮಾಲೀಕರು ಮೋನೀಶ್ ಸಿ.‌(Builder), ನಾಯಕ ದಿಲೀಪ್ ರಾಜ್. 9)ಯುವರತ್ನ ಚಾಂಪಿಯನ್ಸ್ ಮಾಲೀಕರು ಬಿ.ಎಂ.ಶ್ರೀರಾಮ್ ಕೋಲಾರ್(Deepa Films), ನಾಯಕ ಪ್ರವೀಣ್ ತೇಜ್, 10) ಮೌರ್ಯ ವೈಟ್ ಗೋಲ್ಡ್, ಮಾಲೀಕರು ಬಾಬು ಸಿ.ಜೆ(White Gold), ನಾಯಕ ನಿರಂಜನ್ ದೇಶಪಾಂಡೆ.

TAGGED:appu cup season 2sandalwoodಅಪ್ಪು ಕಪ್‌ ಸೀಸನ್‌ 2ಅಶ್ವಿನಿ ಪುನೀತ್ ರಾಜ್‍ಕುಮಾರ್ಶ್ರೀಮುರಳಿ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
7 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

pm modi visits plane crash site ahmedabad
Latest

Photo Gallery: ಅಹಮದಾಬಾದ್‌ನಲ್ಲಿ ವಿಮಾನ ದುರಂತ ನಡೆದ ಸ್ಥಳಕ್ಕೆ ಮೋದಿ ಭೇಟಿ

Public TV
By Public TV
1 minute ago
Mandya 2 1
Crime

ಐಪಿಎಲ್ ಬೆಟ್ಟಿಂಗ್ ಆಡಲು ಮನೆಗಳ್ಳತನ ಮಾಡುತ್ತಿದ್ದ ಖದೀಮ ಪೊಲೀಸರ ಅತಿಥಿ

Public TV
By Public TV
6 minutes ago
M B Patil 1
Bengaluru City

ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ: ಎಂ.ಬಿ ಪಾಟೀಲ್

Public TV
By Public TV
12 minutes ago
Air Hostess Roshni
Latest

Ahmedabad Plane Crash- ಆಕಾಶದಲ್ಲಿ ಹಾರಾಡುವ ಕನಸು ಕಂಡಿದ್ದ ಗಗನಸಖಿಯ ದುರಂತ ಅಂತ್ಯ

Public TV
By Public TV
11 minutes ago
Kerala taluk officer suspended for casteist slur at nurse Ranjitha killed in Air India crash
Latest

ರಂಜಿತಾ ಸಾವಿಗೆ ವ್ಯಂಗ್ಯ – ಕೇರಳ ಉಪತಹಶೀಲ್ದಾರ್ ಅಮಾನತು

Public TV
By Public TV
14 minutes ago
vinay kulkarni
Bengaluru City

ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?