ನೂಪುರ್ ಶರ್ಮಾ ವಿರುದ್ಧ ಕತಾರ್ ಕಿಡಿ – ಟ್ರೆಂಡಿಂಗ್ ಆಯ್ತು #BycottQatarAirways ಅಭಿಯಾನ

Public TV
2 Min Read
Qatar Airways

ನವದೆಹಲಿ: ಪ್ರವಾದಿ ಮೊಹಮ್ಮದ್ ಅವರ ಕುರಿತು ಬಿಜೆಪಿ ರಾಷ್ಟ್ರೀಯ ವಕ್ತಾರರಾದ ನೂಪುರ್ ಶರ್ಮಾ ಆಕ್ಷೇಪಾರ್ಹ ಹೇಳಿಕೆಯ ಬಳಿಕ ಇದೀಗ ಭಾರತ ಹಾಗೂ ಅರಬ್ ದೇಶಗಳ ಮಧ್ಯೆ ತಿಕ್ಕಾಟ ತಾರಕಕ್ಕೇರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಬಾಯ್‍ಕಾಟ್ ಕೂಗು ಕೇಳಿಬರುತ್ತಿದೆ.

Nupur Sharma 1

ನೂಪುರ್ ಶರ್ಮಾ, ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಮತ್ತು ಅವರ ಪತ್ನಿಯ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರಂಭಗೊಂಡ ವಿವಾದ ಬಳಿಕ ನೂಪುರ್ ಶರ್ಮಾರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸುವ ಮಟ್ಟಿಗೆ ಮುಂದುವರಿದಿತ್ತು. ಆ ಬಳಿಕ ಇದೀಗ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆ ಆರಂಭವಾಗಿದೆ. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‍ ಕುರಿತು ಆಕ್ಷೇಪಾರ್ಹ ಹೇಳಿಕೆ – ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅಮಾನತು

ನೂಪುರ್ ಶರ್ಮಾ ಕೇವಲ ಉದಾಹರಣೆಯಾಗಿ ಪ್ರವಾದಿ ಮೊಹಮ್ಮದ್ ಕುರಿತಾಗಿ ಮಾತನಾಡಿದ್ದಾರೆ. ಹೊರತು ಅವಹೇಳನಕಾರಿ ಮಾಡಿಲ್ಲ ಎಂದು ನೂಪುರ್ ಶರ್ಮಾರ ಹೇಳಿಕೆ ಪರ ಧ್ವನಿ ಕೇಳಿ ಬರುತ್ತಿದೆ. ಈ ನಡುವೆ ಅರಬ್ ದೇಶಗಳಾದ ಕತಾರ್, ಓಮನ್, ಸೌದಿ ಅರೇಬಿಯಾದಲ್ಲಿ ಭಾರತದಿಂದ ರಫ್ತಾಗುತ್ತಿರುವ ಸರಕುಗಳು ಸೇರಿದಂತೆ ಆಹಾರ ಉತ್ಪನ್ನಗಳನ್ನು ಖರೀದಿಸದಂತೆ ಬಾಯ್‍ಕಾಟ್ ಚಳವಳಿ ಆರಂಭವಾಗಿದೆ. ಈ ನಡುವೆ ಭಾರತದಲ್ಲಿ ಕಾರ್ಯಚರಿಸುತ್ತಿರುವ ಕತಾರ್ ಏರ್ವೇಸ್‍ಗೆ ಬಹಿಷ್ಕಾರ ಹಾಕಿ. ನಾವು ಅರಬ್ ದೇಶಗಳ ಯಾವುದೇ ಉತ್ಪನ್ನಗಳನ್ನು ಬಳಸುವುದಿಲ್ಲ ಎಂದು ಪ್ರತಿಜ್ಞೆ ಮಾಡೋಣ ಎಂಬ ಅಭಿಯಾನ ಭಾರತದಲ್ಲಿ ಆರಂಭವಾಗಿದೆ. ಇದನ್ನೂ ಓದಿ: ಬಿಜೆಪಿ ಎಚ್ಚೆತ್ತುಕೊಂಡಿರುವುದು ಮುಸ್ಲಿಮರ ಭಾವನೆಗೆ ಧಕ್ಕೆಯುಂಟಾಗಿದೆ ಎಂದಲ್ಲ: ಒಮರ್ ಅಬ್ದುಲ್ಲಾ

https://twitter.com/ALoanIndian/status/1533486948161323008

ಭಾರತೀಯರ ವಾದವೇನು?
ನಮ್ಮ ಹಿಂದೂ ದೇವರುಗಳನ್ನು ಮಾತ್ರವಲ್ಲದೆ ನಮ್ಮ ಭಾರತ ಮಾತೆಯನ್ನು ಅವಮಾನಿಸಿದ ಎಂ.ಎಫ್ ಹುಸೇನ್‍ಗೆ ಕತಾರ್ ಪೌರತ್ವ ನೀಡಿದೆ. ಈ ಬಗ್ಗೆ ಕ್ಷಮೆಯಾಚಿಸಬೇಕು. ಹುಸೇನ್ ಭಾರತ ಮಾತೆಯ ನಗ್ನ ಚಿತ್ರಕಲೆ ಬಿಡಿಸಿ ಅವಮಾನ ಮಾಡಿದ್ದ ಅಂತವರಿಗೆ ಪೌರತ್ವ ನೀಡಿದೆ. ಆದರೆ ನೂಪುರ್ ಶರ್ಮಾ ಕೇವಲ ಉದಾಹರಣೆಗಾಗಿ ಪ್ರವಾದಿ ಮೊಹಮ್ಮದ್ ಕುರಿತಾಗಿ ಆಡಿದ ಮಾತಿಗೆ ಈ ರೀತಿಯ ಪ್ರತಿಕಾರ ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

https://twitter.com/DivyaRajput060/status/1533737481798942722

ಭಯೋತ್ಪಾದನೆಯ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ನೀಡುತ್ತಿದ್ದ ಧನಸಹಾಯವನ್ನು ಸೌದಿ ಸ್ಥಗಿತಗೊಳಿಸಿದ ನಂತರ ಕತಾರ್ ಭಾರತದಲ್ಲಿ ಇಸ್ಲಾಮಿ ಭಯೋತ್ಪಾದನೆಯ ಪ್ರಮುಖ ಪ್ರಾಯೋಜಕವಾಗಿ ಹೊರಹೊಮ್ಮುತ್ತಿದೆ. ಕತಾರ್ ಮತ್ತು ಟರ್ಕಿ ಸೌದಿ ಅರೇಬಿಯಾವನ್ನು ವಿಶ್ವದ ಹೊಸ ಇಸ್ಲಾಮಿಸ್ಟ್ ನಾಯಕನಾಗಿ ಬದಲಾಯಿಸುವ ಕಾರ್ಯಕ್ಕೆ ಮುಂದಾಗುತ್ತಿದೆ. ಇದನ್ನೂ ಓದಿ: ಹಿಂದಿ ಹಿಂದುಳಿದ ರಾಜ್ಯಗಳ ಭಾಷೆ, ಇದು ಶೂದ್ರರಿಗೆ ಮಾತ್ರ: ಡಿಎಂಕೆ ಸಂಸದ

ಗಲ್ಫ್ ದೇಶಗಳ ಪ್ರಮುಖ ಆದಾಯದ ಮೂಲ ಪ್ರವಾಸೋದ್ಯಮ. ನಮ್ಮ ದೇಶದ ವಿಚಾರಕ್ಕೆ ತಲೆ ಹಾಕಿದ್ದಕ್ಕೆ ಅಲ್ಲಿನ ವಿಮಾನ ಸೇವೆಯ ಬಳಸಬಾರದು. ಜೊತೆ ಆ ದೇಶಗಳಿಗೆ ಪ್ರವಾಸ ಹೋಗುವುದನ್ನು ನಿಲ್ಲಿಸಬೇಕು ಎಂಬ ಮಾತು ಕೇಳಿಬರುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *