ಸ್ಯಾಂಟ್ರೋ ರವಿ ಪ್ರಕರಣ ಸಿಐಡಿ ಒಪ್ಪಿಸಿ ಶಬರಿಮಲೆಗೆ ಹೊರಟ ಆರಗ ಜ್ಞಾನೇಂದ್ರ

Public TV
1 Min Read
ARAGAJANENDRA

ಬೆಂಗಳೂರು: ಸ್ಯಾಂಟ್ರೋ ರವಿ ಪ್ರಕರಣವನ್ನು (Santro Ravi Case)  ಸರ್ಕಾರ ಸಿಐಡಿ (CID) ತನಿಖೆಗೆ ಒಪ್ಪಿಸಿದೆ. ಗೃಹಸಚಿವ ಆರಗ ಜ್ಞಾನೇಂದ್ರ ಸೂಚನೆ ಮೇರೆಗೆ ಈಗಾಗಲೇ ಸಿಐಡಿ ತನಿಖೆಗೆ ಪೊಲೀಸ್ ಮಹಾನಿರ್ದೇಶಕರು ಆದೇಶಿಸಿದ್ದಾರೆ.

SANTRO RAVI 1 1

ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿರುವ ಹಿನ್ನೆಲೆ ಮೈಸೂರು ವಿಜಯನಗರ ಪೊಲೀಸರು ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ಸಿಐಡಿ ಪೊಲೀಸರಿಗೆ ಎಸಿಪಿ ಶಿವಶಂಕರ್ ನೀಡಲಿದ್ದಾರೆ. ಈ ಬಗ್ಗೆ ನ್ಯಾಯಾಲಯಕ್ಕೆ ಮೈಸೂರು ಪೊಲೀಸರು ಮಾಹಿತಿ ನೀಡಿದ್ದಾರೆ. ಇದೇ ಕಾರಣಕ್ಕೆ ಜನವರಿ 25 ರವರೆಗೆ ಸ್ಯಾಂಟ್ರೋ ರವಿ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿದೆ. ಇದನ್ನೂ ಓದಿ: ಗೃಹ ಸಚಿವರಿಗೆ ಅವರ ಇಲಾಖೆಯಲ್ಲಿ ನಡೆಯೋ ವಿಷಯ ಗೊತ್ತಿಲ್ಲವೇ?: ಹೆಚ್‍ಡಿಕೆ ವಾಗ್ದಾಳಿ

ಸ್ಯಾಂಟ್ರೋ ರವಿ ಪರ ವಕೀಲರು ಇನ್ನೆರಡು ದಿನಗಳಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಇನ್ನು, ನಟೋರಿಯಸ್ ಕ್ರಿಮಿನಲ್‍ನ್ನು ಯಾಕೆ ನ್ಯಾಯಾಂಗ ಬಂಧನಕ್ಕೆ ನೀಡಿದರು? ಸೂಕ್ತ ತನಿಖೆಗೆ ಒಳಪಡಿಸಬೇಕು ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಮಧ್ಯೆ, ಆರಗ ಜ್ಞಾನೇಂದ್ರ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಇರುಮುಡಿ ಹೊತ್ತು ಶಬರಿ ಮಲೆಗೆ ಸೆಕ್ಯೂರಿಟಿ ಜೊತೆ ತೆರಳಿದ್ದಾರೆ. ಇದನ್ನೂ ಓದಿ: ನನಗೆ ಯಾವುದೇ ನೋಟಿಸ್‌ ಬಂದಿಲ್ಲ: ಯತ್ನಾಳ್‌

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *