ಬೆಳಗಾವಿ: ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಚಲಾಯಿಸುತ್ತಿದ್ದ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಶಾಸಕರ ಕುಟುಂಬ ಪ್ರಾಣಾಪಾಯದಿಂದ ಪಾರಾಗಿದೆ.
ಖಾನಾಪುರ ತಾಲೂಕಿನ ಜಾಂಬೋಟಿ ಬಳಿ ಘಟನೆ ನಡೆದಿದ್ದು, ಗೋವಾದಿಂದ ಧಾರವಾಡಕ್ಕೆ ಮರಳುತ್ತಿದ್ದಾಗ ಅಪಘಾತವಾಗಿದೆ. ಶಾಸಕ ಅರವಿಂದ ಬೆಲ್ಲದ್ ಕುಟುಂಬ ಸಮೇತ ಗೋವಾಕ್ಕೆ ಹೋಗಿದ್ದರು. ಟ್ರಿಪ್ ಮುಗಿಸಿ ವಾಪಾಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಟಾಟಾ ಹೆಕ್ಸಾ ಕಾರು ಪಲ್ಟಿಯಾಗಿದೆ.
ಅದೃಷ್ಟವಶಾತ್ ಶಾಸಕ ಅರವಿಂದ ಮತ್ತು ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದು, ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.