Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಅರ್ಜುನನ ಕಾಲಿಗೆ ಗುಂಡೇಟು ಬಿದ್ದಿಲ್ಲ, ಯಾವುದೇ ಲೋಪ ಆಗಿಲ್ಲ: ವೈದ್ಯ ರಮೇಶ್ ಸ್ಪಷ್ಟನೆ

Public TV
Last updated: December 10, 2023 8:27 pm
Public TV
Share
4 Min Read
HASSAN DR RAMESH
SHARE

– ಕಾರ್ಯಾಚರಣೆಯ ಸಂಪೂರ್ಣ ವಿವರ ಹಂಚಿಕೊಂಡ ವನ್ಯಜೀವಿ ವೈದ್ಯ

ಹಾಸನ: ಯಾವುದೇ ಕಾರಣದಿಂದ ಅರ್ಜುನನ (Arjuna) ಕಾಲಿಗೆ ಗುಂಡೇಟು ಬಿದ್ದಿಲ್ಲ. ನಮ್ಮ ಕಾರ್ಯಾಚರಣೆ ತಂಡದ ಯಾರ ಬಳಿಯು ಬಂದೂಕು ಇರಲಿಲ್ಲ. ನಮ್ಮ ಸಿಬ್ಬಂದಿ ಬಳಿ ಇದ್ದದ್ದು ಡಬಲ್ ಬ್ಯಾರಲ್ ಚರ್ರೆ ಕೋವಿ ಮಾತ್ರ. ಅದರಲ್ಲಿ ಹಾರಿದ ಚರ‍್ರೆಯಿಂದ ಆನೆ ಸಾಯೋದಿಲ್ಲ. ಇದನ್ನ ಕಾಡಾನೆ ಹೆದರಿಸಲು ಮಾತ್ರ ಬಳಕೆ ಮಾಡುತ್ತೇವೆ ಎಂದು ವನ್ಯಜೀವಿ ವೈದ್ಯ ಡಾ.ರಮೇಶ್ (Dr.Ramesh) ಸ್ಪಷ್ಟನೆ ನೀಡಿದ್ದಾರೆ.

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ದಸರಾ ಆನೆ ಅರ್ಜುನನ ಸಾವು ಪ್ರಕರಣದ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅರ್ಜುನ ತಾನು ಪ್ರಾಣ ಬಿಟ್ಟು ನಮ್ಮನ್ನ ಉಳಿಸಿದ್ದಾನೆ. ನಾನು ನಿತ್ಯ ಹೊರ ಬರುವಾಗ ಅರ್ಜುನನಿಗೆ ಕೈ ಮುಗಿದು ಬರಬೇಕು. ನಾವು ಬದುಕಿರೋದು ಅರ್ಜುನನಿಂದ ಎಂದು ಅರ್ಜುನನ ಸಾವು ನೆನೆದು ಭಾವುಕರಾದರು. ಕಾರ್ಯಾಚರಣೆ ದಿನ ಅಂದರೆ ಡಿಸೆಂಬರ್ 4 ರಂದು ನಾನು, ಆನೆ ಮಾವುತ ವಿನು, ಹಾಗೂ ಕರ್ನಾಟಕ ಭೀಮ ಆನೆ ಮಾವುತ ಗುಂಡ ಅರ್ಜುನನ ಮೇಲೆ ಇದ್ದೆವು. ಪ್ರಶಾಂತ್ ಆನೆ ಮೇಲೆ ಕೊಡಗಿನ ಡಿಆರ್‌ಎಫ್‌ಓ ರಂಜನ್ ಇದ್ದರು. ವಿಕ್ರಾಂತ್ ಹೆಸರಿನ ಒಂದು ಹಾಗೂ ಮತ್ತೊಂದು ಸಲಗ ಸೇರಿ ಎರಡು ಆನೆಗಳ ಸೆರೆಗೆ ಟಾರ್ಗೆಟ್ ಫಿಕ್ಸ್ ಆಗಿತ್ತು ಎಂದು ಕಾರ್ಯಾಚರಣೆಯ ಇಂಚಿಂಚು ಮಾಹಿತಿಯನ್ನು ಬಿಚ್ಚಿಟ್ಟರು. ಇದನ್ನೂ ಓದಿ: 5 ಕಿ.ಮೀ. ಹೊತ್ತು, ಬೆಟ್ಟದಿಂದ ಬೆಟ್ಟಕ್ಕೆ ಹಗ್ಗ ಕಟ್ಟಿ ಟೆಕ್ಕಿ ಮೃತದೇಹ ತಂದ್ರು!

ವಿಕ್ರಾಂತ್ ಆನೆ ಎದುರಾದರೆ ನಾನು ಹಾಗೂ ಇನ್ನೊಂದು ಆನೆ ಎದುರಾದರೆ ರಂಜನ್ ಅರವಳಿಕೆ ಮದ್ದು ನೀಡುವ ನಿರ್ಧಾರ ಆಗಿತ್ತು. ಅದರಂತೆ ನಾವು ಕಾಡಿನೊಳಗೆ ಎಂಟ್ರಿ ಆದಾಗ ಒಂದು ಆನೆಯ ಗುಂಪು ಕಾಣಿಸಿತು. ಅದರಲ್ಲಿ ವಿಕ್ರಾಂತ್ ಆನೆ ಇರಲಿಲ್ಲ. ನಾವು 400 ಮೀಟರ್ ಮುಂದೆ ಹೋದಾಗ ಒಂದು ಆನೆ ಕಾಣಿಸಿತು. ಕಾಡಿನಲ್ಲಿ ಲಂಟಾನ ಹೆಚ್ಚಾಗಿ ಬೆಳೆದಿದ್ದರಿಂದ ಆನೆಯ ಮುಖ ಕಾಣಲಿಲ್ಲ. ಆನೆಯ ಹಿಂಬದಿಯ ಸ್ವಲ್ಪ ಭಾಗ ಕಾಣುತ್ತಿದ್ದಾಗ ಅದು ಸಣ್ಣ ಆನೆ ಎಂದು ಭಾವಿಸಿದೆವು. ಅಲ್ಲಿರುವ ಆನೆ ನಮ್ಮ ಟಾರ್ಗೆಟ್ ಆನೆಯಾ ಅಥವಾ ಹೆಣ್ಣಾನೆಯಾ ಎಂಬುದು ಖಾತ್ರಿ ಆಗಬೇಕಿತ್ತು. ನಾವು ಮೇಲಿದ್ದೆವು, ಆ ಒಂಟಿಸಲಗ ಕೆಳಗೆ ಇತ್ತು. ಇದು ದೊಡ್ಡ ಆನೆ ಎಂದು ಖಾತ್ರಿ ಆದಾಗ ಆನೆಗೆ ಸುತ್ತುವರಿದೆವು. ಇದನ್ನು ಡಾಟ್ ಮಾಡುವ ಬಗ್ಗೆ ರಂಜನ್ ಮತ್ತು ನಾವು ಮಾತನಾಡಿಕೊಂಡು ನಾನು ಡಾಟ್ ಮಾಡುತ್ತೇನೆ ಎಂದು ಹೇಳಿ ನಾನು ನನ್ನ ಅರವಳಿಕೆ ಸಜ್ಜು ಮಾಡಿಕೊಂಡೆ. ಪ್ರಸರ್ ಫಿಕ್ಸ್ ಮಾಡಿ ಡಾಟ್ ಮಾಡಲು ರೆಡಿಯಾಗಿದ್ದ ವೇಳೆಗೆ ಆ ಆನೆ ಏಕಾಏಕಿ ದಾಳಿ ಮಾಡಿತು. ಅದು ಮುಖವನ್ನು ಮುಂದೆ ಮಾಡಿ ಬಂದಿದ್ದರಿಂದ ನಾನು ಮುಖಕ್ಕೆ ಡಾಟ್ ಮಾಡಲು ಆಗಲಿಲ್ಲ ಎಂದರು. ಇದನ್ನೂ ಓದಿ: ನಮ್ಮ ಪಕ್ಷದ ಮುಖಂಡರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ: ಬೋಸರಾಜು

ಯಾವುದೇ ಆನೆಯ ಮುಖದ ಭಾಗಕ್ಕೆ, ಹೊಟ್ಟೆಗೆ ಇಂಜೆಕ್ಷನ್ ಹೊಡೆಯುವ ಹಾಗಿಲ್ಲ. ಅಕಸ್ಮಾತ್ ಹಾಗೆ ಇಂಜೆಕ್ಟ್ ಆದರೆ ಆನೆಯ ಜೀವಕ್ಕೆ ಅಪಾಯ ಇದೆ. ಹಾಗಾಗಿ ಆಗ ಡಾಟ್ ಮಾಡಲು ಆಗಲಿಲ್ಲ. ಏಕಾಏಕಿ ಅರ್ಜುನನ ಮೇಲೆ ಆನೆ ದಾಳಿ ಮಾಡಿದಾಗ ನಾವೆಲ್ಲಾ ಕೆಳಗೆ ಬೀಳುವಂತೆ ಆದೆವು. ಈ ವೇಳೆಯಲ್ಲಿ ನನ್ನ ಕೈಯಲ್ಲಿದ್ದ ಅರವಳಿಕೆ ಟ್ರಿಗರ್ ಆಗಿ ಫೈರ್ ಆಗಿದೆ. ಅದು ಆಕಾಶದ ಕಡೆಗೆ ಹಾರಿ ಕೆಳಗೆ ಬೀಳುವಾಗ ಪ್ರಶಾಂತ್ ಕಾಲಿಗೆ ಬಿದ್ದಿದೆ. ಅದು ನನಗೆ ಮಾಹಿತಿ ಇರಲಿಲ್ಲ. ಪ್ರಶಾಂತ್‌ಗೆ ಅರವಳಿಕೆ ಮದ್ದು ಬಿದ್ದ ಬಗ್ಗೆ ಗೊತ್ತಾದ ಕೂಡಲೇ ನಾನು ಓಡಿದೆ. ಅಷ್ಟರಲ್ಲಿ ಅರ್ಜುನ ಕಾಡಾನೆ ಜೊತೆ ಫೈಟ್ ಮಾಡಿ ಓಡಿಸಿತ್ತು. ನಾವು ಪ್ರಶಾಂತ್ ಆನೆ ಬಳಿ ಬಂದು ಅಲ್ಲಿ ರಿವರ್ಸ್ ಇಂಜೆಕ್ಷನ್ ಕೊಡುವ ವೇಳೆಗೆ ಕಾಡಾನೆ ಮತ್ತೆ ಬಂದು ಜಗಳಕ್ಕೆ ಬಿದ್ದಿದೆ. ಅರ್ಜುನನ ಮಾವುತ ವಿನು ಕೂಡ ನನ್ನೊಟ್ಟಿಗೆ ಇದ್ದಿದ್ದರಿಂದ ಅಲ್ಲಿ ಮತ್ತೊಬ್ಬ ಹುಡುಗ ಅರ್ಜುನನ ಮೇಲಿದ್ದ. ನಾವು ವಾಪಸ್ ಓಡುವ ವೇಳೆಗೆ ಅಲ್ಲಿ ಎರಡೂ ಆನೆಗಳ ನಡುವೆ ಜಗಳ ಶುರುವಾಗಿತ್ತು. ನಾನು ಮತ್ತೊಂದು ಸುತ್ತು ಅರವಳಿಕೆ ಲೋಡ್ ಮಾಡಿ ಕಾಡಾನೆಗೆ ಹೊಡೆದೆ. ಆದರೆ ಆ ಆನೆ ಕೆಳಗೆ ಬೀಳಲಿಲ್ಲ. ಅಷ್ಟು ಹೊತ್ತಿಗೆ ಅರ್ಜುನನಿಗೆ ಗಂಭೀರವಾಗಿ ಗಾಯವಾಗಿ ಕೆಳಗೆ ಬಿದ್ದಿದ್ದ. ಈ ಆನೆಗಳ ಕಾಳಗ ಶುರುವಾದಾಗ ಬೇರೆ ಆನೆಗಳು ಹೆದರಿ ಓಡಿವೆ ಎಂದು ತಿಳಿಸಿದರು. ಇದನ್ನೂ ಓದಿ: ಆಸ್ತಿ ಬರೆಯಲು ನಿರಾಕರಿಸಿದ ಅಮ್ಮನ ಶಿರಚ್ಛೇದ ಮಾಡಿದ ಪಾಪಿ ಪುತ್ರ!

ಅರ್ಜನನ ಕಾಲಿಗೆ ಕೂಳೆ ಹೊಡೆದು ಗಾಯ ಆಗಿತ್ತು. ಅದನ್ನ ಮಾವುತ ವಿನು ಅಲ್ಲೇ ಗಮನಿಸಿದ್ದಾನೆ. ಕಾರ್ಯಾಚರಣೆ ವೇಳೆ ಯಾವುದೇ ಲೋಪ ಆಗಿಲ್ಲ. ಜನರು ದಸರಾ ಅಂಬಾರಿ ಹೊತ್ತಾಗ ಮಾತ್ರ ಅರ್ಜುನನನ್ನು ನೋಡಿರುತ್ತಾರೆ. ನಾವು ನಿತ್ಯ ಅವನ ಜೊತೆ ಇರೋರು. ನಮಗೆ ಆಗಿರುವ ನೋವು ಹೇಳಲು ಆಗಲ್ಲ. ನಾನು ಇದುವರೆಗೆ 65 ಆನೆ ಸೆರೆ ಕಾರ್ಯಾಚರಣೆ ಮಾಡಿದ್ದೇನೆ. 40 ಆನೆಗಳಿಗೆ ನಾನೇ ಅರವಳಿಕೆ ಡಾಟ್ ಮಾಡಿದ್ದೇನೆ. 7 ಹುಲಿ, 50ಕ್ಕೂ ಹೆಚ್ಚು ಚಿರತೆ, 10 ಕರಡಿಗೆ ಡಾಟ್ ಮಾಡಿದ್ದೇನೆ. ಎಲ್ಲವೂ ಕೂಡ ಯೋಜನೆಯಂತೆಯೇ ನಡೆಯಿತು. ಆದರೆ ಕಾಡಾನೆ ದಾಳಿಯಿಂದ ಅರ್ಜುನ ಮೃತಪಟ್ಟಿದೆ. ಬಹುಶಃ ಮಾವುತ ವಿನು ಅರ್ಜುನನ ಮೇಲೆ ಇದ್ದಿದ್ದರೆ ಹೋರಾಟ ಮಾಡಬಹುದಿತ್ತಾ ಅಥವಾ ಆಗಲೂ ಹೀಗೆ ಆಗುತ್ತಿತ್ತಾ ಎಂದು ಹೇಳೋದು ಕಷ್ಟ ಎಂದು ಅರ್ಜುನನ ಸಾವಿನ ಬಗ್ಗೆ ಹರಡಿದ್ದ ಹಲವು ವದಂತಿಗಳಿಗೆ ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಉಪ್ಪಿನಂಗಡಿಯಲ್ಲಿ ಒಂದೇ ಕೋಮಿನ ಜೋಡಿಯನ್ನು ತಡೆದು ಹಲ್ಲೆಗೆ ಯತ್ನ!

TAGGED:arjunaDr Rameshelephanthassansakleshpuraಅರ್ಜುನಆನೆಡಾ.ರಮೇಶ್ಸಕಲೇಶಪುರಹಾಸನ
Share This Article
Facebook Whatsapp Whatsapp Telegram

You Might Also Like

Iran Ayatollah Ali Khamenei
Latest

ಇರಾನ್‌ಗೆ ಅಣ್ವಸ್ತ್ರ ನೀಡಲು ಮುಂದೆ ಬಂದ ಹಲವು ದೇಶಗಳು!

Public TV
By Public TV
19 minutes ago
murdeshwar temple dress code
Latest

ಅರೆಬರೆ ಬಟ್ಟೆ ಧರಿಸಿ ಬಂದ್ರೆ ನೋ ಎಂಟ್ರಿ- ಮುರುಡೇಶ್ವರ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

Public TV
By Public TV
8 hours ago
k.l.rahul test cricket
Cricket

ಮಳೆಗೆ 3ನೇ ದಿನದಾಟ ಅಂತ್ಯ; 2ನೇ ಇನ್ನಿಂಗ್ಸ್‌ನಲ್ಲಿ ಭಾರತಕ್ಕೆ 96 ರನ್‌ ಮುನ್ನಡೆ – ಕನ್ನಡಿಗ ಕೆ.ಎಲ್.ರಾಹುಲ್‌ ಆಸರೆ

Public TV
By Public TV
8 hours ago
DK Shivakumar
Bengaluru City

ದಿನಕ್ಕೆ 45ಕ್ಕೂ ಹೆಚ್ಚು ನಿಮಿಷ ಉಳಿಸಬಹುದು – ಸುರಂಗ ಮಾರ್ಗದ ಉಪಯೋಗ ತಿಳಿಸಿದ ಡಿಕೆಶಿ

Public TV
By Public TV
9 hours ago
crude oil well petrol
Latest

Israel-Iran tensions: ರಷ್ಯಾ, ಅಮೆರಿಕದಿಂದ ತೈಲ ಆಮದು ಹೆಚ್ಚಿಸಿದ ಭಾರತ

Public TV
By Public TV
9 hours ago
helmet traffic police
Bengaluru City

ನಾನು ಹೆಲ್ಮೆಟ್ ಹಾಕಲ್ಲ ಏನಿವಾಗ – ಜೆಡಿಎಸ್ ಅಧ್ಯಕ್ಷ ಎಂದವನ ಜೈಲಿಗಟ್ಟಿದ ಪೊಲೀಸರು

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?