ಶ್ರೀನಗರ: ಆಕಸ್ಮಿಕವಾಗಿ ನಡೆದ ಗ್ರೆನೇಡ್ ಸ್ಫೋಟದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಯೋಧರು ಹುತಾತ್ಮರಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ನ ಎಲ್ಒಸಿ ಬಳಿ ನಡೆದಿದೆ.
ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನಲ್ಲಿ ಸೈನಿಕರು ಎಲ್ಒಸಿ ಗಡಿಯಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ ಸಂಭವಿಸಿದೆ.
ಗಾಯಗೊಂಡ ಸೈನಿಕರನ್ನು ತಕ್ಷಣವೇ ಹೆಲಿಕಾಪ್ಟರ್ ಮೂಲಕ ಉಧಂಪುರ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಸಂದರ್ಭದಲ್ಲಿ ಸೇನಾ ಕ್ಯಾಪ್ಟನ್ ಮತ್ತು ನೈಬ್ ಸುಬೇದಾರ್(ಜೆಸಿಒ) ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಭಯೋತ್ಪಾದಕರ ಗುಂಡಿಗೆ CRPF ಯೋಧ ಹುತಾತ್ಮ
ಭಾನುವಾರ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗೊಂಗೂ ಕ್ರಾಸಿಂಗ್ ಬಳಿ ನಡೆದಿತ್ತು. ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಸಿಆರ್ಪಿಎಫ್ ಸಹಾಯಕ ಸಬ್ ಇನ್ಸ್ಪೆಕ್ಟರ್ ಹುತಾತ್ಮರಾಗಿದ್ದಾರೆ. ಇದನ್ನೂ ಓದಿ: ಡಿಕೆಶಿ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ