– ಓರ್ವ ನಾಗರಿಕನೂ ಬಲಿ
ಶ್ರೀನಗರ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ ಮುಂದುವರೆದಿದೆ. ಸೇನಾ ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಮೇಜರ್ ಡಿ.ಎಸ್ ದೊಂಡಿಯಾಲ್, ಹೆಡ್ ಕಾನ್ಸ್ ಸ್ಟೇಬಲ್ ಸೇವಾರಾಂ, ಸಿಪಾಯಿ ಅಜಯ್ ಕುಮಾರ್, ಹರೀಶ್ ಸಿಂಗ್ ಹುತಾತ್ಮರಾಗಿದ್ದಾರೆ. ಸಿಪಾಯಿ ಗುಲ್ಜಾರ್ ಮಹಮ್ಮದ್ ಗೆ ಗಂಭೀರ ಗಾಯಗಳಾಗಿದ್ದು ಅವರಿಗೆ ಬದಾಮಿಬಾಗ್ ನಲ್ಲಿರುವ ಸೇನೆಯ 92ನೇ ಬೇಸ್ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗುಂಡಿನ ದಾಳಿಗೆ ಮುಷ್ತಾಕ್ ಅಹ್ಮದ್ ಎಂಬ ನಾಗರಿಕ ಕೂಡ ಬಲಿಯಾಗಿದ್ದಾರೆ.
Visuals: The 4 Army personnel including a Major, who were killed in action during encounter between terrorists and security forces, in Pinglan area of Pulwama district, belonged to 55 Rashtriya Rifles. #JammuAndKashmir (Visuals deferred by unspecified time) pic.twitter.com/Wa2sxz3bzT
— ANI (@ANI) February 18, 2019
ಪುಲ್ವಾಮಾ ಜಿಲ್ಲೆಯ ಪಿಂಗ್ಲಾನ್ ಪ್ರದೇಶದಲ್ಲಿ ಯೋಧರ ಹಾಗೂ ಉಗ್ರರ ನಡುವೆ ಅಹೋರಾತ್ರಿ ಭೀಕರ ಕಾಳಗ ನಡೆದಿದೆ. 40 ಯೋಧರ ಬಲಿ ಪಡೆದ ಆದಿಲ್ ದಾರ್ ಗೆ ನೆರವು ನೀಡಿದ್ದ ಉಗ್ರರ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸೈನಿಕರು ಆ ಪ್ರದೇಶವನ್ನು ಸುತ್ತುವರಿದು ದಾಳಿ ನಡೆಸಿದಾಗ ಉಗ್ರರು ಪ್ರತಿ ದಾಳಿ ನಡೆಸಿದ್ದಾರೆ.
55 ರಾಷ್ಟ್ರೀಯ ರೈಫಲ್ಸ್ ರೆಜಿಮೆಂಟ್, ಪೊಲೀಸ್ ಮತ್ತು ಸಿಆರ್ ಪಿಎಫ್ ಒಳಗೊಂಡು ಭಾರತೀಯ ಸೇನೆ ಈ ಕಾರ್ಯಚರಣೆಯನ್ನು ಕೈಕೊಂಡಿತ್ತು. ಯೋಧರು ತಮ್ಮನ್ನು ಸುತ್ತುವರಿದಿದ್ದಾರೆ ಎಂದು ತಿಳಿದ ಜೈಷ್ ಇ ಮೊಹಮ್ಮದ್ ಸಂಘಟನೆಯ ಮೂವರು ಉಗ್ರರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿ ಬಳಿಕ ಉಗ್ರರು ಅಲ್ಲಿಂದ ಪರಾರಿ ಆಗಿದ್ದಾರೆ ಎನ್ನಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv