ಬೆಂಗಳೂರು: ಹಲಸೂರು ಕೆರೆಯಲ್ಲಿ (Halasuru Lake) ಸೂರ್ಯ ದೇವರ ಆರಾಧನೆಗೆ (Chhath Puja) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯವಸ್ಥೆ ಮಾಡಿದೆ. ನವೆಂಬರ್ 19 ರಿಂದ ನವೆಂಬರ್ 20 ರವರೆಗೆ ಹಲಸೂರು ಕೆರೆಯಲ್ಲಿ ‘ಛಠ್ ಪೂಜೆ’ (ಸೂರ್ಯದೇವರ ಆರಾಧನೆ) ನಡೆಯಲಿದೆ.
ಹಲಸೂರು ಕೆರೆಯ ಗಣಪತಿ ವಿಸರ್ಜನೆ ಮಾಡುವ ಕಲ್ಯಾಣಿಯಲ್ಲಿ ಛಠ್ ಪೂಜೆಗೆ ಬಿಬಿಎಂಪಿ ವ್ಯವಸ್ಥೆಗೊಳಿಸಿದೆ. ಸದರಿ ಛಠ್ ಪೂಜೆಯಲ್ಲಿ ಭಾಗವಹಿಸುವ ಸಾರ್ವಜನಿಕರು ಹಲಸೂರು ಕೆರೆಯ ಉತ್ತರ ದಿಕ್ಕಿನಲ್ಲಿರುವ ಅಣ್ಣಸ್ವಾಮಿ ಮೊದಲಿಯಾರ್ ರಸ್ತೆಯ (ಕಾರಾ ಕೆಫೆ ರೆಸ್ಟೋರೆಂಟ್ ಮುಂಭಾಗದ) ಮುಖ್ಯ ದ್ವಾರದ ಮೂಲಕವೇ ಬಂದು, ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಮಾತ್ರವೇ ಛಠ್ ಪೂಜೆಯನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಸದರಿ ಪೂಜೆಯಲ್ಲಿ ಭಾಗವಹಿಸುವ ಸಾರ್ವಜನಿಕರು ಯಾವುದೇ ರೀತಿಯ ಪ್ಲಾಸ್ಟಿಕ್ ಪೇಪರ್ ಮುಂತಾದ ವಿಷಯುಕ್ತ ವಸ್ತುಗಳನ್ನು ಕೆರೆಯ ಬಳಿ ತರಬಾರದೆಂದು ಸೂಚಿಸಲಾಗಿದೆ. ಇದನ್ನೂ ಓದಿ: ಹಳಿಯಲ್ಲಿ ಕಬ್ಬಿಣದ ರಾಡ್, ದೊಡ್ಡ ಮರದ ದಿಮ್ಮಿ – ಮೈಸೂರಿನಲ್ಲಿ ತಪ್ಪಿತು ಭಾರೀ ರೈಲು ದುರಂತ
ಹಲಸೂರು ಕೆರೆಯ ಬೇರೆ ದಿಕ್ಕಿನ ದ್ವಾರಗಳು ಮುಚ್ಚಿರುತ್ತದೆ. ಪೂರ್ವ ವಲಯದ ಬೇರೆ ಯಾವುದೇ ಸ್ಥಳದಲ್ಲಿ ಛಠ್ ಪೂಜೆಗೆ ವ್ಯವಸ್ಥೆ ಕಲ್ಪಿಸಿರುವುದಿಲ್ಲ ಎಂದು ಪೂರ್ವ ವಲಯ ಆಯುಕ್ತರಾದ ಶ್ರೀಮತಿ ಆರ್ ಸ್ನೇಹಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಹಲೋ ಅಪ್ಪ, ನಾನು ಕೊಟ್ಟಿರೋದು ನಾಲ್ಕೋ ಐದೋ ಅಷ್ಟು ಮಾತ್ರ ಮಾಡಿ – ಯತೀಂದ್ರ ಮಾತಿನ ಮರ್ಮ ಏನು?