ಬೆಂಗಳೂರು: ಐಷಾರಾಮಿ ಜೀವನ ನಡೆಸಲು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಶುಕ್ರವಾರ ಡಾಬಸ್ ಪೇಟೆ ಪೊಲೀಸರು ಬಂಧಿಸಿದ್ದಾರೆ.
ನರೇಂದ್ರಬಾಬು ಬಿ.ಆರ್ (29) ಬಂಧಿತ ಆರೋಪಿ. ವ್ಯಕ್ತಿಯು ಮನೆಗಳ್ಳತನ, ಸರಗಳ್ಳತನ ಮಾಡುತ್ತಿದ್ದನು. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯ ಅಗಳಕುಪ್ಪೆ ಬಳಿ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ಇದನ್ನೂ ಓದಿ: ಕಂಗನಾಳನ್ನು ಹೀರೋಯಿನ್ ಮಾಡಿದ್ದು ಆ ಜ್ಯೋತಿಷಿ: ಅಸಲಿ ಸತ್ಯ ಬಾಯ್ಬಿಟ್ಟ ನಟ ಪ್ರಭಾಸ್
ಈತ ಮೂಲತಃ ತುಮಕೂರು ಜಿಲ್ಲೆ ಕೊರಟೆಗೆರೆ ತಾಲೂಕು ಬೊಮ್ಮಲದೇವಿಪುರ ಗ್ರಾಮದವನಾಗಿದ್ದು, ಈತನಿಂದ ಸುಮಾರು 4.5 ಲಕ್ಷ ಮೌಲ್ಯದ 77 ಗ್ರಾಂ ಚಿನ್ನಾಭರಣ, 1/4 ಕೆ.ಜಿ ಬೆಳ್ಳಿ ಜಪ್ತಿ ಮಾಡಲಾಗಿದೆ. ನರೇಂದ್ರಬಾಬು 1 ಮನೆಗಳ್ಳತನ, 1 ಸರಗಳ್ಳತನ ಸೇರಿ ಎರಡು ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯಾಗಿದ್ದನು. ಇದನ್ನೂ ಓದಿ : ಪೂಜಾ ಹೆಗ್ಡೆ ಅವಕಾಶ ಕಿತ್ತುಕೊಂಡ ರಶ್ಮಿಕಾ ಮಂದಣ್ಣ
ಈ ಕುರಿತು ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.